<p><strong>ಹುಬ್ಬಳ್ಳಿ</strong>: ಇಲ್ಲಿನ ಸಿದ್ಧಾರೂಢ ಮಠದ ವ್ಯವಸ್ಥಾಪಕ ಈರಣ್ಣ ತುಪ್ಪದ ಅವರನ್ನು ಅಮಾನತು ಮಾಡಿ ಮಠದ ಟ್ರಸ್ಟ್ ಕಮಿಟಿಯ ಮುಖ್ಯ ಆಡಳಿತಾಧಿಕಾರಿಯೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ಭಾರತಿ ಅವರು ಆದೇಶಿಸಿದ್ದಾರೆ.</p>.<p>ಈರಣ್ಣ ವಿರುದ್ಧದ ಆಪಾದನೆಗಳ ಸತ್ಯಾಸತ್ಯತೆ ಬಗ್ಗೆ ಕೂಲಂಕುಶ ತನಿಖೆಯ ಅಗತ್ಯತೆ ಕಾರಣ, ಮಠದ ಟ್ರಸ್ಟ್ ಕಮಿಟಿಯ ಏ.20ರ ಸಭೆಯ ಗೊತ್ತುವಳಿ ಅನ್ವಯ ವಿಚಾರಣೆಗೆ ಆದೇಶಿಸಲಾಗಿದೆ.</p>.<p>‘ಈರಣ್ಣ ಅವರನ್ನು ಅಮಾನತಿನಲ್ಲಿಟ್ಟು, ಅವರ ವಿರುದ್ಧದ ಆಪಾದನೆಗಳ ಬಗ್ಗೆ ವಿಚಾರಣೆ ನಡೆಸಿ ಒಂದು ತಿಂಗಳ ಒಳಗೆ ವರದಿ ಸಲ್ಲಿಸಬೇಕು. ಅಲ್ಲದೆ, ಅವರಿಗೆ ಮಠದ ವ್ಯವಸ್ಥಾಪಕ ಕಾರ್ಯದ ನಿರ್ವಹಣೆ ಹೊರತುಪಡಿಸಿ ಮಠದ ಬೇರೆ ಕಾರ್ಯಕ್ಕೆ ತಾತ್ಪೂರ್ತಿಯಾಗಿ ನಿಯೋಜಿಸಬೇಕು’ ಎಂದು ನಿರ್ದೇಶಿಸಿದ್ದಾರೆ.</p>.<p>ಆರೋಪಕ್ಕೆ ಸಂಬಂಧಿಸಿದಂತೆ ತುಪ್ಪದ ಅವರು ಸಮಜಾಯಿಸಿ ನೀಡಿದ್ದರೂ, ಆರೋಪವು ಸಂಶಯಕ್ಕೆ ಕಾರಣವಾಗಿದೆ ಎಂದು ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ಮಠದ ಸಿಬ್ಬಂದಿಗೆ ನಿಯಮಾವಳಿ ಮೀರಿ ಬಡ್ತಿ, ಮಠದ ಗೋಶಾಲೆಯ ಜಾನುವಾರುಗಳನ್ನು ಅನಧಿಕೃತವಾಗಿ ಮಾರಾಟ, ನಿಯಮ ಗಾಳಿಗೆ ತೂರಿ ಟೆಂಡರ್ ನಿರ್ವಹಣೆ, ತಮಗೆ ಬೆಂಬಲ ನೀಡದ ಟ್ರಸ್ಟಿಗಳಿಗೆ ಬ್ಲ್ಯಾಕ್ಮೇಲ್ ಮಾಡಿದ್ದಾರೆ’ ಎಂದು ಈರಣ್ಣ ವಿರುದ್ಧ ಭಕ್ತರು ಆರೋಪ ಮಾಡಿದ್ದರು.</p>.<p>‘ಅಮಾನತಿನ ವೇಳೆ ಅವರಿಗೆ ವ್ಯವಸ್ಥಾಪಕ ಹುದ್ದೆ ಹೊರತುಪಡಿಸಿ ಬೇರೆ ಕಾರ್ಯಕ್ಕೆ ನಿಯೋಜಿಸಬೇಕು ಎಂಬ ಆದೇಶವಿದ್ದರೂ ಬೇರೆ ಕಾರ್ಯಕ್ಕೆ ನಿಯೋಜಿಸಿಲ್ಲ. ಅಲ್ಲದೆ, ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ. ಅಲ್ಲದೆ, ಈ ವೇಳೆ ಪೂರ್ಣ ವೇತನ ನೀಡಲಾಗುತ್ತಿದೆ’ ಎಂದು ಭಕ್ತರು ದೂರಿದ್ದಾರೆ.</p>.<p>ಮಠದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ ಮಾತನಾಡಿ, ‘ ಈರಣ್ಣ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅವರನ್ನು ಕಡ್ಡಾಯ ರಜೆ ಮೇಲೆ ಕಳಿಸಿರುವುದು ಕಾನೂನು ಬಾಹಿರ. ಈ ವೇಳೆ ಅವರಿಗೆ ಯಾವುದೇ ವೇತನ ನೀಡಬಾರದು. ಆರೋಪಗಳ ಕುರಿತು ಪಾರದರ್ಶಕ ತನಿಖೆಯಾಗಬೇಕು. ಇದರಲ್ಲಿ ಶಾಮೀಲಾಗಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-24-976857088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಇಲ್ಲಿನ ಸಿದ್ಧಾರೂಢ ಮಠದ ವ್ಯವಸ್ಥಾಪಕ ಈರಣ್ಣ ತುಪ್ಪದ ಅವರನ್ನು ಅಮಾನತು ಮಾಡಿ ಮಠದ ಟ್ರಸ್ಟ್ ಕಮಿಟಿಯ ಮುಖ್ಯ ಆಡಳಿತಾಧಿಕಾರಿಯೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ಭಾರತಿ ಅವರು ಆದೇಶಿಸಿದ್ದಾರೆ.</p>.<p>ಈರಣ್ಣ ವಿರುದ್ಧದ ಆಪಾದನೆಗಳ ಸತ್ಯಾಸತ್ಯತೆ ಬಗ್ಗೆ ಕೂಲಂಕುಶ ತನಿಖೆಯ ಅಗತ್ಯತೆ ಕಾರಣ, ಮಠದ ಟ್ರಸ್ಟ್ ಕಮಿಟಿಯ ಏ.20ರ ಸಭೆಯ ಗೊತ್ತುವಳಿ ಅನ್ವಯ ವಿಚಾರಣೆಗೆ ಆದೇಶಿಸಲಾಗಿದೆ.</p>.<p>‘ಈರಣ್ಣ ಅವರನ್ನು ಅಮಾನತಿನಲ್ಲಿಟ್ಟು, ಅವರ ವಿರುದ್ಧದ ಆಪಾದನೆಗಳ ಬಗ್ಗೆ ವಿಚಾರಣೆ ನಡೆಸಿ ಒಂದು ತಿಂಗಳ ಒಳಗೆ ವರದಿ ಸಲ್ಲಿಸಬೇಕು. ಅಲ್ಲದೆ, ಅವರಿಗೆ ಮಠದ ವ್ಯವಸ್ಥಾಪಕ ಕಾರ್ಯದ ನಿರ್ವಹಣೆ ಹೊರತುಪಡಿಸಿ ಮಠದ ಬೇರೆ ಕಾರ್ಯಕ್ಕೆ ತಾತ್ಪೂರ್ತಿಯಾಗಿ ನಿಯೋಜಿಸಬೇಕು’ ಎಂದು ನಿರ್ದೇಶಿಸಿದ್ದಾರೆ.</p>.<p>ಆರೋಪಕ್ಕೆ ಸಂಬಂಧಿಸಿದಂತೆ ತುಪ್ಪದ ಅವರು ಸಮಜಾಯಿಸಿ ನೀಡಿದ್ದರೂ, ಆರೋಪವು ಸಂಶಯಕ್ಕೆ ಕಾರಣವಾಗಿದೆ ಎಂದು ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ಮಠದ ಸಿಬ್ಬಂದಿಗೆ ನಿಯಮಾವಳಿ ಮೀರಿ ಬಡ್ತಿ, ಮಠದ ಗೋಶಾಲೆಯ ಜಾನುವಾರುಗಳನ್ನು ಅನಧಿಕೃತವಾಗಿ ಮಾರಾಟ, ನಿಯಮ ಗಾಳಿಗೆ ತೂರಿ ಟೆಂಡರ್ ನಿರ್ವಹಣೆ, ತಮಗೆ ಬೆಂಬಲ ನೀಡದ ಟ್ರಸ್ಟಿಗಳಿಗೆ ಬ್ಲ್ಯಾಕ್ಮೇಲ್ ಮಾಡಿದ್ದಾರೆ’ ಎಂದು ಈರಣ್ಣ ವಿರುದ್ಧ ಭಕ್ತರು ಆರೋಪ ಮಾಡಿದ್ದರು.</p>.<p>‘ಅಮಾನತಿನ ವೇಳೆ ಅವರಿಗೆ ವ್ಯವಸ್ಥಾಪಕ ಹುದ್ದೆ ಹೊರತುಪಡಿಸಿ ಬೇರೆ ಕಾರ್ಯಕ್ಕೆ ನಿಯೋಜಿಸಬೇಕು ಎಂಬ ಆದೇಶವಿದ್ದರೂ ಬೇರೆ ಕಾರ್ಯಕ್ಕೆ ನಿಯೋಜಿಸಿಲ್ಲ. ಅಲ್ಲದೆ, ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ. ಅಲ್ಲದೆ, ಈ ವೇಳೆ ಪೂರ್ಣ ವೇತನ ನೀಡಲಾಗುತ್ತಿದೆ’ ಎಂದು ಭಕ್ತರು ದೂರಿದ್ದಾರೆ.</p>.<p>ಮಠದ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ ಮಾತನಾಡಿ, ‘ ಈರಣ್ಣ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅವರನ್ನು ಕಡ್ಡಾಯ ರಜೆ ಮೇಲೆ ಕಳಿಸಿರುವುದು ಕಾನೂನು ಬಾಹಿರ. ಈ ವೇಳೆ ಅವರಿಗೆ ಯಾವುದೇ ವೇತನ ನೀಡಬಾರದು. ಆರೋಪಗಳ ಕುರಿತು ಪಾರದರ್ಶಕ ತನಿಖೆಯಾಗಬೇಕು. ಇದರಲ್ಲಿ ಶಾಮೀಲಾಗಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-24-976857088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>