<p>ಹುಬ್ಬಳ್ಳಿ: ವಿದ್ಯಾನಗರದ ಎಜಿಎಂಎಂ ಹಾಸ್ಟೆಲ್ ಆವರಣದಲ್ಲಿ ಮೇ 29 ಮತ್ತು ಮೇ 30ರಂದು ಅಖಿಲ ಭಾರತ ಮಾಧ್ವ ಮಹಾ ಮಂಡಳ ವಿದ್ಯಾರ್ಥಿ ನಿಲಯದ ಷಷ್ಠಿಪೂರ್ತಿ ಮಹೋತ್ಸವ ಹಾಗೂ ನವೀಕೃತ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮೇ 29ರಂದು ಸಂಜೆ 5.30ಕ್ಕೆ ಹಳೇ ಆದಾಯ ತೆರಿಗೆ ಕಚೇರಿ ರಸ್ತೆಯ ಮಾರುತಿ ಮಂದಿರದಿಂದ ಎಜಿಎಂಎಂ ವಿದ್ಯಾರ್ಥಿ ನಿಲಯದವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ 7ಕ್ಕೆ ನವೀಕೃತ ಕೊಠಡಿಗಳ ಉದ್ಘಾಟನೆ ನಡೆಯಲಿದೆ. 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.</p>.<p>ಮೇ 30ರಂದು ಬೆಳಿಗ್ಗೆ 9.30ಕ್ಕೆ ಸಂಸ್ಥಾನ ಪೂಜೆ. 11ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ. ಸಂಜೆ 6ಕ್ಕೆ ಪಂ.ಅನಂತ ಕುಲಕರ್ಣಿ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಲಿದೆ.</p>.<p>ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಎರಡೂ ದಿನದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಾನ್ನಿಧ್ಯ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-1655965540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ವಿದ್ಯಾನಗರದ ಎಜಿಎಂಎಂ ಹಾಸ್ಟೆಲ್ ಆವರಣದಲ್ಲಿ ಮೇ 29 ಮತ್ತು ಮೇ 30ರಂದು ಅಖಿಲ ಭಾರತ ಮಾಧ್ವ ಮಹಾ ಮಂಡಳ ವಿದ್ಯಾರ್ಥಿ ನಿಲಯದ ಷಷ್ಠಿಪೂರ್ತಿ ಮಹೋತ್ಸವ ಹಾಗೂ ನವೀಕೃತ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.</p>.<p>ಮೇ 29ರಂದು ಸಂಜೆ 5.30ಕ್ಕೆ ಹಳೇ ಆದಾಯ ತೆರಿಗೆ ಕಚೇರಿ ರಸ್ತೆಯ ಮಾರುತಿ ಮಂದಿರದಿಂದ ಎಜಿಎಂಎಂ ವಿದ್ಯಾರ್ಥಿ ನಿಲಯದವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ 7ಕ್ಕೆ ನವೀಕೃತ ಕೊಠಡಿಗಳ ಉದ್ಘಾಟನೆ ನಡೆಯಲಿದೆ. 7.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.</p>.<p>ಮೇ 30ರಂದು ಬೆಳಿಗ್ಗೆ 9.30ಕ್ಕೆ ಸಂಸ್ಥಾನ ಪೂಜೆ. 11ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ. ಸಂಜೆ 6ಕ್ಕೆ ಪಂ.ಅನಂತ ಕುಲಕರ್ಣಿ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಲಿದೆ.</p>.<p>ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಎರಡೂ ದಿನದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಾನ್ನಿಧ್ಯ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-1655965540</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>