<p>ಹುಬ್ಬಳ್ಳಿ: ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ಏಪ್ರಿಲ್ 27ರಂದು ಬೆಳಿಗ್ಗೆ 10.30ಕ್ಕೆ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಲಿದೆ ಎಂದು ಸುಳ್ಳ ಪಂಚಗ್ರಹ ಹಿರೇಮಠದ ಪಟ್ಟಾಧ್ಯಕ್ಷ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.</p>.<p>‘ಕಲ್ಮೇಶ್ವರ ದೇವರು ಮತ್ತು ಗುರು ಸಿದ್ದರಾಮೇಶ್ವರ ದೇವರಿಗೆ ಬೆಳಿಗ್ಗೆ 7 ಗಂಟೆಯಿಂದ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ಜರುಗಲಿದೆ. ಜೀರ್ಣೋದ್ಧಾರಗೊಂಡ ಕಲ್ಮೇಶ್ವರ ದೇವಸ್ಥಾನದ ಉದ್ಘಾಟನೆ, ಕಳಸಾರೋಹಣ, ಗುರು ಸಿದ್ಧರಾಮೇಶ್ವರ ಮಂಗಲ ಭವನದ ಉದ್ಘಾಟನೆ 10 ಗಂಟೆಗೆ ನಡೆಯಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಅಡ್ಡಪಲ್ಲಕ್ಕಿ ಮಹೋತ್ಸವದಲ್ಲಿ ಮಹಿಳೆಯರಿಂದ ಪೂರ್ಣಕುಂಭ, ಆರತಿ, ದೀಪೋತ್ಸವ ಇರಲಿದೆ. ಕಲ್ಮೇಶ್ವರ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಸಂಜೆ 5 ಗಂಟೆಗೆ ಕಲ್ಮೇಶ್ವರ ದೇವರ ರಥೋತ್ಸವ, 7.30ಕ್ಕೆ ಜನ ಜಾಗೃತಿ ಧರ್ಮ ಸಮಾರಂಭ ನೆರವೇರುವುದು. ನಾಡಿನ ವಿವಿಧ ಸ್ವಾಮೀಜಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-24-1438585992</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ಏಪ್ರಿಲ್ 27ರಂದು ಬೆಳಿಗ್ಗೆ 10.30ಕ್ಕೆ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಲಿದೆ ಎಂದು ಸುಳ್ಳ ಪಂಚಗ್ರಹ ಹಿರೇಮಠದ ಪಟ್ಟಾಧ್ಯಕ್ಷ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.</p>.<p>‘ಕಲ್ಮೇಶ್ವರ ದೇವರು ಮತ್ತು ಗುರು ಸಿದ್ದರಾಮೇಶ್ವರ ದೇವರಿಗೆ ಬೆಳಿಗ್ಗೆ 7 ಗಂಟೆಯಿಂದ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ಜರುಗಲಿದೆ. ಜೀರ್ಣೋದ್ಧಾರಗೊಂಡ ಕಲ್ಮೇಶ್ವರ ದೇವಸ್ಥಾನದ ಉದ್ಘಾಟನೆ, ಕಳಸಾರೋಹಣ, ಗುರು ಸಿದ್ಧರಾಮೇಶ್ವರ ಮಂಗಲ ಭವನದ ಉದ್ಘಾಟನೆ 10 ಗಂಟೆಗೆ ನಡೆಯಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಅಡ್ಡಪಲ್ಲಕ್ಕಿ ಮಹೋತ್ಸವದಲ್ಲಿ ಮಹಿಳೆಯರಿಂದ ಪೂರ್ಣಕುಂಭ, ಆರತಿ, ದೀಪೋತ್ಸವ ಇರಲಿದೆ. ಕಲ್ಮೇಶ್ವರ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ. ಸಂಜೆ 5 ಗಂಟೆಗೆ ಕಲ್ಮೇಶ್ವರ ದೇವರ ರಥೋತ್ಸವ, 7.30ಕ್ಕೆ ಜನ ಜಾಗೃತಿ ಧರ್ಮ ಸಮಾರಂಭ ನೆರವೇರುವುದು. ನಾಡಿನ ವಿವಿಧ ಸ್ವಾಮೀಜಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-24-1438585992</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>