<p><strong>ಹುಬ್ಬಳ್ಳಿ:</strong> ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯಮನೂರ ಗ್ರಾಮದ ನಿವಾಸಿ ಫಕ್ಕಿರಪ್ಪ ಮಲ್ಲಪ್ಪ ಬಣಗಾರ (45) ಸೋಮವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.</p>.<p>ನವಲಗುಂದದ ಸಿದ್ದಾಪುರ ಓಣಿಯ ನಿವಾಸಿ ಮುತ್ತಪ್ಪ ಶಂಕರಪ್ಪ ಪೂಜಾರ (44) ಮಂಗಳವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ.</p>.<p>ಗದಗ ವರದಿ: ಗದಗ ತಾಲ್ಲೂಕಿನಲ್ಲಿ ಜೂನ್ನಲ್ಲಿ ಐವರು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಅವರಲ್ಲಿ ಮೂವರು 35 ರಿಂದ 40 ವರ್ಷದೊಳಗಿನವರು’ ಎಂದು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ ತಿಳಿಸಿದ್ದಾರೆ.</p>.<p>‘ಜಿಲ್ಲಾ ಆಸ್ಪತ್ರೆಯಲ್ಲಿ ಈ ವರ್ಷ ಜೂನ್ವರೆಗೆ 34 ಮಂದಿ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಈ ಪೈಕಿ ಆರು ಮಂದಿ 50 ವರ್ಷದೊಳಗಿನವರು’ ಎಂದು ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯಮನೂರ ಗ್ರಾಮದ ನಿವಾಸಿ ಫಕ್ಕಿರಪ್ಪ ಮಲ್ಲಪ್ಪ ಬಣಗಾರ (45) ಸೋಮವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.</p>.<p>ನವಲಗುಂದದ ಸಿದ್ದಾಪುರ ಓಣಿಯ ನಿವಾಸಿ ಮುತ್ತಪ್ಪ ಶಂಕರಪ್ಪ ಪೂಜಾರ (44) ಮಂಗಳವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರಿ, ಇಬ್ಬರು ಪುತ್ರರು ಇದ್ದಾರೆ.</p>.<p>ಗದಗ ವರದಿ: ಗದಗ ತಾಲ್ಲೂಕಿನಲ್ಲಿ ಜೂನ್ನಲ್ಲಿ ಐವರು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಅವರಲ್ಲಿ ಮೂವರು 35 ರಿಂದ 40 ವರ್ಷದೊಳಗಿನವರು’ ಎಂದು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ ತಿಳಿಸಿದ್ದಾರೆ.</p>.<p>‘ಜಿಲ್ಲಾ ಆಸ್ಪತ್ರೆಯಲ್ಲಿ ಈ ವರ್ಷ ಜೂನ್ವರೆಗೆ 34 ಮಂದಿ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಈ ಪೈಕಿ ಆರು ಮಂದಿ 50 ವರ್ಷದೊಳಗಿನವರು’ ಎಂದು ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>