<p><strong>ಹುಬ್ಬಳ್ಳಿ</strong>: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ನಗರದಲ್ಲಿ ಶುಕ್ರವಾರ ಆಯೋಜಿಸಿರುವ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಅಂಗವಾಗಿ ವಿವಿಧ ಮಠಾಧೀಶರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.</p><p>ಮೂರುಸಾವಿರ ಮಠದಿಂದ ಆರಂಭವಾದ ಮೆರವಣಿಗೆ ಕೊಪ್ಪಿಕರ್ ರಸ್ತೆ, ಸರ್. ಸಿದ್ದಪ್ಪ ಕಂಬಳಿ ರಸ್ತೆ ಮಾರ್ಗವಾಗಿ ನೆಹರೂ ಕ್ರೀಡಾಂಗಣದಲ್ಲಿನ ಹಾನಗಲ್ಲ ಶ್ರೀ ಕುಮಾರೇಶ್ವರ ಮಹಾಮಂಟಪದವರೆಗೆ ನಡೆಯಿತು. ನಂದಿಕೋಲು ಕುಣಿತ, ಕಹಳೆ, ಜಯಘೋಷ ಮೆರುಗು ನೀಡಿತು.</p><p>ಮೈದಾನಕ್ಕೆ ಮೆರವಣಿಗೆಯಲ್ಲಿ ಬಂದ ಸ್ವಾಮೀಜಿಗಳನ್ನು ಪುಷ್ಪವೃಷ್ಟಿಗರೆದು ಸ್ವಾಗತಿಸಲಾಯಿತು. ಉರಿ ಬಿಸಿಲಲ್ಲೂ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p><p>ಇದಕ್ಕೂ ಮುನ್ನ, ನಗರದ ಬಿವಿಬಿ ಕಾಲೇಜಿನಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಈಶ್ವರ ಖಂಡ್ರೆ, ಸಂಸದ ಜಗದೀಶ ಶೆಟ್ಟರ್ ಸೇರಿದಂತೆ ಸಮಾಜದ ಹಲವು ಮುಖಂಡರು ಸಭೆ ನಡೆಸಿ, ಸಮಾವೇಶದಲ್ಲಿ ಕೈಗೊಳ್ಳಬೇಕಾದ ನಿರ್ಣಯಗಳ ಕುರಿತು ಚರ್ಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ನಗರದಲ್ಲಿ ಶುಕ್ರವಾರ ಆಯೋಜಿಸಿರುವ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಅಂಗವಾಗಿ ವಿವಿಧ ಮಠಾಧೀಶರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.</p><p>ಮೂರುಸಾವಿರ ಮಠದಿಂದ ಆರಂಭವಾದ ಮೆರವಣಿಗೆ ಕೊಪ್ಪಿಕರ್ ರಸ್ತೆ, ಸರ್. ಸಿದ್ದಪ್ಪ ಕಂಬಳಿ ರಸ್ತೆ ಮಾರ್ಗವಾಗಿ ನೆಹರೂ ಕ್ರೀಡಾಂಗಣದಲ್ಲಿನ ಹಾನಗಲ್ಲ ಶ್ರೀ ಕುಮಾರೇಶ್ವರ ಮಹಾಮಂಟಪದವರೆಗೆ ನಡೆಯಿತು. ನಂದಿಕೋಲು ಕುಣಿತ, ಕಹಳೆ, ಜಯಘೋಷ ಮೆರುಗು ನೀಡಿತು.</p><p>ಮೈದಾನಕ್ಕೆ ಮೆರವಣಿಗೆಯಲ್ಲಿ ಬಂದ ಸ್ವಾಮೀಜಿಗಳನ್ನು ಪುಷ್ಪವೃಷ್ಟಿಗರೆದು ಸ್ವಾಗತಿಸಲಾಯಿತು. ಉರಿ ಬಿಸಿಲಲ್ಲೂ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p><p>ಇದಕ್ಕೂ ಮುನ್ನ, ನಗರದ ಬಿವಿಬಿ ಕಾಲೇಜಿನಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಈಶ್ವರ ಖಂಡ್ರೆ, ಸಂಸದ ಜಗದೀಶ ಶೆಟ್ಟರ್ ಸೇರಿದಂತೆ ಸಮಾಜದ ಹಲವು ಮುಖಂಡರು ಸಭೆ ನಡೆಸಿ, ಸಮಾವೇಶದಲ್ಲಿ ಕೈಗೊಳ್ಳಬೇಕಾದ ನಿರ್ಣಯಗಳ ಕುರಿತು ಚರ್ಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>