<p><strong>ಹುಬ್ಬಳ್ಳಿ:</strong> ಇಲ್ಲಿನ ವಿದ್ಯಾನಗರದ ಕೆಎಂಸಿಆರ್ಐನಲ್ಲಿ ಅಂದಾಜು ₹2 ಕೋಟಿಗೂ ಅಧಿಕ ಮೊತ್ತದ ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿಗಳಿಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.</p>.<p>‘ಕೆಎಂಸಿಆರ್ಐ ಘಟಕದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ರಸ್ತೆ ನೀರು ಗಟಾರಗಳು ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಲು ಬದ್ಧನಿದ್ದೇನೆ’ ಎಂದು ಶಾಸಕರು ತಿಳಿಸಿದರು.</p>.<p>‘ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಸಾಕಷ್ಟು ನೆರವು ಸಿಗುತ್ತಿದ್ದು, ರಾಜ್ಯ ಸರ್ಕಾರವೂ ನೆರವನ್ನು ನೀಡುತ್ತಿದೆ. ಏಳು ಜಿಲ್ಲೆಗಳಿಂದ ರೋಗಿಗಳು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಾರೆ. ಬಡ ರೋಗಿಗಳಿಗೆ ಉತ್ತಮ ಸೇವೆ ಸಿಗಬೇಕು. ಆ ಬಗ್ಗೆ ಕಾಳಜಿ ವಹಿಸಬೇಕಿದೆ’ ಎಂದರು.</p>.<p>ಕೆಎಂಸಿಆರ್ಐ ಅಧೀಕ್ಷಕ ಈಶ್ವರ ಹೊಸಮನಿ, ಸೂಪರಿಡೆಂಟ್ ಹಸಬಿ, ಬಿಜೆಪಿ ಮುಖಂಡ ಲಿಂಗರಾಜ್ ಪಾಟೀಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-24-667773780</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಇಲ್ಲಿನ ವಿದ್ಯಾನಗರದ ಕೆಎಂಸಿಆರ್ಐನಲ್ಲಿ ಅಂದಾಜು ₹2 ಕೋಟಿಗೂ ಅಧಿಕ ಮೊತ್ತದ ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿಗಳಿಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.</p>.<p>‘ಕೆಎಂಸಿಆರ್ಐ ಘಟಕದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ರಸ್ತೆ ನೀರು ಗಟಾರಗಳು ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಲು ಬದ್ಧನಿದ್ದೇನೆ’ ಎಂದು ಶಾಸಕರು ತಿಳಿಸಿದರು.</p>.<p>‘ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಸಾಕಷ್ಟು ನೆರವು ಸಿಗುತ್ತಿದ್ದು, ರಾಜ್ಯ ಸರ್ಕಾರವೂ ನೆರವನ್ನು ನೀಡುತ್ತಿದೆ. ಏಳು ಜಿಲ್ಲೆಗಳಿಂದ ರೋಗಿಗಳು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಾರೆ. ಬಡ ರೋಗಿಗಳಿಗೆ ಉತ್ತಮ ಸೇವೆ ಸಿಗಬೇಕು. ಆ ಬಗ್ಗೆ ಕಾಳಜಿ ವಹಿಸಬೇಕಿದೆ’ ಎಂದರು.</p>.<p>ಕೆಎಂಸಿಆರ್ಐ ಅಧೀಕ್ಷಕ ಈಶ್ವರ ಹೊಸಮನಿ, ಸೂಪರಿಡೆಂಟ್ ಹಸಬಿ, ಬಿಜೆಪಿ ಮುಖಂಡ ಲಿಂಗರಾಜ್ ಪಾಟೀಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-24-667773780</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>