ಅಭಿಷೇಕ ಹಿರೇಮಠ ಆಕ್ಷೇಪಾರ್ಹ ಸ್ಟೇಟಸ್ ಇಟ್ಟಿದ್ದಾನೆ ಎಂದು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ದೂರುದಾರ ಹಾಗೂ ಗಲಭೆಯಲ್ಲಿ ಪಾಲ್ಗೊಂಡ ಆರೋಪದ ಮೇಲೆ ಬಂಧಿತನಾಗಿ ನ್ಯಾಯಾಂಗ ವಶದಲ್ಲಿದ್ದ ಮಹ್ಮದ್ಅಜರುದ್ದೀನ್ ಜಿಲ್ಲೇರಿ ಅವನನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆಗಾಗಿ ನ್ಯಾಯಾಲಯ ಅವನನ್ನು ಮೇ 2ರವರೆಗೆ ಪೊಲೀಸ್ ಕಸ್ಟಡಿ ಒಪ್ಪಿಸಿದೆ.