ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೇ ಹುಬ್ಬಳ್ಳಿ ಗಲಭೆ: 7 ಮಂದಿಗೆ ಜಾಮೀನು

Last Updated 16 ಮೇ 2022, 12:36 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತಿಂಗಳ ಹಿಂದೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾದ 156 ಆರೋಪಿಗಳಲ್ಲಿ ಏಳು ಮಂದಿಗೆ ಜಾಮೀನು ದೊರೆತಿದೆ.

ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ವಿದ್ಯಾರ್ಥಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

ಜಾಮೀನಿಗೆ 148 ಮಂದಿಯಿಂದ ಅರ್ಜಿ ಸಲ್ಲಿಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪಿಯುಸಿ, ಪದವಿ ಶೈಕ್ಷಣಿಕ ಹಿನ್ನೆಲೆಯಲ್ಲಿ ಆರು ಮಂದಿಗೆ ಹಾಗೂ ವೈದ್ಯಕೀಯ ಶಿಕ್ಷಣದ ಹಿನ್ನೆಲೆಯಲ್ಲಿ ಒಬ್ಬರಿಗೆ ಜಾಮೀನು ನೀಡಿದೆ ಎಂದು ಆರೋಪಿ ಪರ ವಾದ ಮಂಡಿಸಿದ್ದ ವಕೀಲ ಬಿ.ಆರ್. ಮಹ್ಮದನವರ್ ತಿಳಿಸಿದರು.

ಜಾಮೀನು ಮೇಲೆ ಬಿಡುಗಡೆಯಾದವರು ಬಳ್ಳಾರಿ, ಮೈಸೂರು, ಕಲಬುರ್ಗಿ ಮತ್ತು ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT