<p><strong>ಹುಬ್ಬಳ್ಳಿ:</strong> ‘ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ವಿರೋಧವಿಲ್ಲ. ಆದರೆ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ವಿರೋಧವಿದೆ’ ಎಂದು ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಜೆ.ಡಿ.ನಾಯ್ಕ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸದೇ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯೊಂದನ್ನೇ ಸದನದಲ್ಲಿ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು’ ಎಂದು ಹೇಳಿದರು.</p>.<p>‘ಎರಡೂ ಮಸೂದೆಗಳನ್ನು ಒಟ್ಟಿಗೆ ತಂದ ಪರಿಣಾಮ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲುಂಟಾಯಿತು. ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿ ವಿರೋಧಿಯಲ್ಲ. ಈ ಮಸೂದೆ ಬೆಂಬಲಿಸುತ್ತದೆ’ ಎಂ ದರು.</p>.<p>‘ಮತದಾರರ ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಇದನ್ನು ವಿರೋಧಿಸುತ್ತಿದೆ. ಕೇಂದ್ರ ಸರ್ಕಾರವು ಈ ಮಸೂದೆಯನ್ನು ಪುನರ್ ಪರಿಶೀಲಿಸಬೇಕು’ ಎಂದು ಆಗ್ರಹಿಸಿದರು.</p>.<p>ಸತೀಶ್ ಮೆಹರವಾಡೆ, ಚಂದ್ರಶೇಖರ ಜುಟ್ಟಲ್, ನೆಹರೂ ಪಾಟೀಲ್, ವಿಶ್ವನಾಥ ಕುಲಕರ್ಣಿ, ಮೋಹನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-1473730958</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ವಿರೋಧವಿಲ್ಲ. ಆದರೆ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ವಿರೋಧವಿದೆ’ ಎಂದು ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಜೆ.ಡಿ.ನಾಯ್ಕ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಮಂಡಿಸದೇ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯೊಂದನ್ನೇ ಸದನದಲ್ಲಿ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು’ ಎಂದು ಹೇಳಿದರು.</p>.<p>‘ಎರಡೂ ಮಸೂದೆಗಳನ್ನು ಒಟ್ಟಿಗೆ ತಂದ ಪರಿಣಾಮ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲುಂಟಾಯಿತು. ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿ ವಿರೋಧಿಯಲ್ಲ. ಈ ಮಸೂದೆ ಬೆಂಬಲಿಸುತ್ತದೆ’ ಎಂ ದರು.</p>.<p>‘ಮತದಾರರ ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಇದನ್ನು ವಿರೋಧಿಸುತ್ತಿದೆ. ಕೇಂದ್ರ ಸರ್ಕಾರವು ಈ ಮಸೂದೆಯನ್ನು ಪುನರ್ ಪರಿಶೀಲಿಸಬೇಕು’ ಎಂದು ಆಗ್ರಹಿಸಿದರು.</p>.<p>ಸತೀಶ್ ಮೆಹರವಾಡೆ, ಚಂದ್ರಶೇಖರ ಜುಟ್ಟಲ್, ನೆಹರೂ ಪಾಟೀಲ್, ವಿಶ್ವನಾಥ ಕುಲಕರ್ಣಿ, ಮೋಹನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-24-1473730958</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>