<p><strong>ಹುಬ್ಬಳ್ಳಿ</strong>: ‘ಕೃತಕ ಬುದ್ಧಿಮತ್ತೆ ಸೇರಿದಂತೆ ಹೊಸ ಹೊಸ ಅವಿಷ್ಕಾರದೊಂದಿಗೆ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ವಿದ್ಯಾರ್ಥಿಗಳು ನಿರಂತರ ಅಧ್ಯಯನ ಹಾಗೂ ಶೈಕ್ಷಣಿಕ ಕೌಶಲ ಬೆಳೆಸಿಕೊಂಡಲ್ಲಿ ಮಾತ್ರ ಪ್ರಗತಿ ಹೊಂದಲು ಸಾಧ್ಯ’ ಎಂದು ಕೆಎಲ್ಇ ಸಂಸ್ಥೆಯ ಬಿಸಿಎ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಿದ್ದಲಿಗಪ್ಪಾ ಸಿ.ಕಡಕೋಳ ಹೇಳಿದರು. </p>.<p>ನಗರದ ಕೆಎಲ್ಇ ಸಂಸ್ಥೆಯ ಬಿಸಿಎ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ‘ಐ2 ಇ2 ತಾಂತ್ರಿಕ ಉತ್ಸವ–2025’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಎಐ ತಂತ್ರಜ್ಞಾನ ಯುಗದಲ್ಲಿ ನೂತನ ಅವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕಿದೆ’ ಎಂದರು. </p>.<p>ಇದೇ ವೇಳೆ ಹಾಕ್ಯಥಾನ್ ಸಾಫ್ಟ್ವೇರ್, ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ ಮತ್ತು ಸೈಬರ್ ಸೆಕ್ಯೂರಿಟಿ ವಿಷಯ ಕುರಿತು ಹಲವು ಸ್ಪರ್ಧೆಗಳು ನಡೆದವು.</p>.<p>ಸ್ಪರ್ಧೆಯಲ್ಲಿ ಒಟ್ಟು 30 ತಂಡಗಳಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. </p>.<p>ವಿದ್ಯಾರ್ಥಿನಿ ಆದಿತ್ಯಾ ಜಿ.ಕೊನ್ನೂರ ಸ್ವಾಗತಿಸಿದರು. ಸುರಕ್ಷಾ ಎಂ.ಬಿ. ವಂದಿಸಿದರು. ನಿಕಿತಾ ಪಾಟೀಲ, ಸ್ಪೂರ್ತಿ ಕೆ., ಮೈತ್ರಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಕೃತಕ ಬುದ್ಧಿಮತ್ತೆ ಸೇರಿದಂತೆ ಹೊಸ ಹೊಸ ಅವಿಷ್ಕಾರದೊಂದಿಗೆ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ವಿದ್ಯಾರ್ಥಿಗಳು ನಿರಂತರ ಅಧ್ಯಯನ ಹಾಗೂ ಶೈಕ್ಷಣಿಕ ಕೌಶಲ ಬೆಳೆಸಿಕೊಂಡಲ್ಲಿ ಮಾತ್ರ ಪ್ರಗತಿ ಹೊಂದಲು ಸಾಧ್ಯ’ ಎಂದು ಕೆಎಲ್ಇ ಸಂಸ್ಥೆಯ ಬಿಸಿಎ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಿದ್ದಲಿಗಪ್ಪಾ ಸಿ.ಕಡಕೋಳ ಹೇಳಿದರು. </p>.<p>ನಗರದ ಕೆಎಲ್ಇ ಸಂಸ್ಥೆಯ ಬಿಸಿಎ ಮಹಾವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ‘ಐ2 ಇ2 ತಾಂತ್ರಿಕ ಉತ್ಸವ–2025’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಎಐ ತಂತ್ರಜ್ಞಾನ ಯುಗದಲ್ಲಿ ನೂತನ ಅವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕಿದೆ’ ಎಂದರು. </p>.<p>ಇದೇ ವೇಳೆ ಹಾಕ್ಯಥಾನ್ ಸಾಫ್ಟ್ವೇರ್, ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ ಮತ್ತು ಸೈಬರ್ ಸೆಕ್ಯೂರಿಟಿ ವಿಷಯ ಕುರಿತು ಹಲವು ಸ್ಪರ್ಧೆಗಳು ನಡೆದವು.</p>.<p>ಸ್ಪರ್ಧೆಯಲ್ಲಿ ಒಟ್ಟು 30 ತಂಡಗಳಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. </p>.<p>ವಿದ್ಯಾರ್ಥಿನಿ ಆದಿತ್ಯಾ ಜಿ.ಕೊನ್ನೂರ ಸ್ವಾಗತಿಸಿದರು. ಸುರಕ್ಷಾ ಎಂ.ಬಿ. ವಂದಿಸಿದರು. ನಿಕಿತಾ ಪಾಟೀಲ, ಸ್ಪೂರ್ತಿ ಕೆ., ಮೈತ್ರಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>