ಹುಬ್ಬಳ್ಳಿ: ವಿಜಯನಗರ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಕೈಗೊಂಡಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಪತ್ನಿ ಎಂ.ಉಷಾ ಅವರೊಂದಿಗೆ ಶುಕ್ರವಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಬಂದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಶಾಸಕ ಜಗದೀಶ ಶೆಟ್ಟರ್ ಅವರು ಶಾಲು ಹಾಕಿ ಸ್ವಾಗತಿಸಿದರು.
ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಪುಸ್ತಕಗಳನ್ನು ನೀಡಿ ಬರಮಾಡಿಕೊಂಡರು..
ಭಾರತೀಯ ವಾಯುಸೇನೆಯ ವಿಶೇಷ ಹೆಲಿಕಾಪ್ಟರ್ ಮೂಲಕ ಹೊಸಪೇಟೆಗೆ ತೆರಳಿದರು.