ಹುಬ್ಬಳ್ಳಿ ಎಪಿಎಂಸಿಯಲ್ಲಿ ರೈತರಿಗೆ, ವ್ಯಾಪಾರಸ್ಥರಿಗೆ ತರಕಾರಿ ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಧಾರವಾಡದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮಾರುಕಟ್ಟೆಗೆ ಬಂದ ಕಾರಣ ಜನಜಾತ್ರೆಯಂತಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಜನರು ಮುಗಿಬಿದ್ದು ಖರೀದಿಯಲ್ಲಿ ತೊಡಗಿದ್ದರಿಂದ ಪೊಲೀಸರು ಬೆತ್ತದ ರುಚಿ ತೋರಿಸಿದರು. ಲಕ್ಷಾಂತರ ರೂಪಾಯಿ ಮೌಲ್ಯದ ತರಕಾರಿ ಬೀದಿ ಮೇಲೆ ರಾಶಿ ಬಿದ್ದು ನಷ್ಟವಾಯಿತು. ಪೊಲೀಸರು ಲಾಠಿ ಜಾರ್ಜ್ ಮಾಡಿರುವುದಕ್ಕೆ ರೈತರು ಮತ್ತು ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸಿದರು.