ವಿಶೇಷ ತಂಡ ರಚಿಸಿ ಮಾಹಿತಿ ಸಂಗ್ರಹಿಸಿದ ಪೊಲೀಸರಿಗೆ, ಶಬನಂ ಬೆಂಗಳೂರಿನ ಯುವಕನನ್ನು ಮದುವೆಯಾಗಿ, ವಿಚ್ಛೇದನ ಪಡೆದು ಮಂಡ್ಯದ ವ್ಯಕ್ತಿಯ ಜೊತೆ ಸ್ನೇಹದಲ್ಲಿರುವುದು ತಿಳಿದು ಬಂದಿತ್ತು. ಶಬನಂ ಮಗುವಿನ ಜೊತೆ ಅವನಲ್ಲಿಗೆ ತೆರಳುತ್ತಿರುವ ಮಾಹಿತಿ ಆಧರಿಸಿ, ಪೊಲೀಸರು ಅವನನ್ನು ಸಂಪರ್ಕಿಸಿ ಸಹಕಾರ ಕೋರಿದ್ದರು. ಆಗ, ಅವನು ಶಬನಂಗೆ ಮೆಜೆಸ್ಟಿಕ್ ಬಸ್ ನಿಲ್ದಾಣದ ಆರನೇ ಪ್ಲಾಟ್ ಫಾರ್ಮ್ ನಲ್ಲಿ ಇರಲು ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದ.