ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರ್‌ನಲ್ಲಿ ಗಲಾಟೆ: ಹುಬ್ಬಳ್ಳಿ–ಧಾರವಾಡ ಪಾಲಿಕೆ ಸದಸ್ಯ ಚೇತನ್ ಹಿರೆಕೆರೂರು ಬಂಧನ

Last Updated 7 ನವೆಂಬರ್ 2022, 7:36 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಗೋಕುಲ‌ ರಸ್ತೆಯ ಐಸ್ ಕ್ಯೂಬ್ ಹೋಟೆಲ್'ನಲ್ಲಿ ಭಾನುವಾರ ರಾತ್ರಿ ನಡೆದ ಗಲಾಟೆಗೆ ಸಂಬಂಧಿಸಿ ಪಾಲಿಕೆ ಸದಸ್ಯ ಚೇತನ ಹಿರೆಕೆರೂರು ಸೇರಿದಂತೆ ನಾಲ್ವರನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸದ್ದಾರೆ.

ಹೊಸೂರಿನ ನಿವಾಸಿಗಳಾದ ರೋಹಿತ ಹಿರೇಕೆರೂರ, ಸಹದೇವ ಹಿರೇಕೆರೂರ ಮತ್ತು ಪ್ರಕಾಶ ಬಂಧಿತ ಇತರ ಆರೋಪಿಗಳು. ಗಲಾಟೆಯಲ್ಲಿ ಹಲ್ಲೆಗೊಳಗಾದ ಕಾರವಾರ ರಸ್ತೆಯ ಮಂಗಲ ಓಣಿ ನಿವಾಸಿ ಬಸವರಾಜ ಚಂದಾವರಕರ ಪ್ರಕರಣ ದಾಖಲಿಸಿದ್ದಾರೆ.

ಬಸವರಾಜ ಅವರು ಸ್ನೇಹಿತರ ಜೊತೆ ಹೋಟೆಲ್'ನಲ್ಲಿ ಇದ್ದಾಗ ಆರೋಪಿಗಳು, ಅವರ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದಾರೆ. ನಂತರ ಮದ್ಯದ ಬಾಟಲಿಯಿಂದ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿದ್ದಾರೆ. ಪೊಲೀಸ್ ದೂರು ನೀಡಿದರೆ ಜೀವ ತೆಗೆಯುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT