ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಶ್ರಮ ಪಟ್ಟರೂ ಫಲ ಲಭಿಸಲಿಲ್ಲ ಎನ್ನುವ ನೋವು ಕಾಡುತ್ತಿದೆ. ಜವಾಬ್ದಾರಿ ಕಡಿಮೆ ಮಾಡಿಕೊಂಡು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ನನ್ನ ರಾಜೀನಾಮೆಯನ್ನು ಪಕ್ಷದ ವರಿಷ್ಠರು ಒಪ್ಫಿಕೊಳ್ಳಬೇಕು. ಕಲಬುರ್ಗಿ ಪಾಲಿಕೆಯಲ್ಲಿ ಯಾರ ಜೊತೆ ಕೈ ಜೋಡಿಸಬೇಕು ಎನ್ನುವುದರ ಬಗ್ಗೆ ಒಂದೆರೆಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.