ಹುಬ್ಬಳ್ಳಿ: ಜನ್ನತ್ ನಗರಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ಅವರು, ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಸೋಮವಾರ ರಾತ್ರಿ ಪ್ರಚಾರ ನಡೆಸಿದರು.
ಇಲ್ಲಿನ ಮಸೀದಿಯಲ್ಲಿ ನಮಾಜ್ ಸಲ್ಲಿಸಿದ ಒವೈಸಿ, ಬಳಿಕ ರಸ್ತೆಯಲ್ಲಿ ತೆರಳಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಅವರನ್ನು ನೋಡಲು ರಸ್ತೆಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.