ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಿಜೆಪಿ ಪ್ರಮುಖ ಪದಾಧಿಕಾರಿಗಳು ಇದ್ದಾರೆ. ಜೋಶಿ, ಶೆಟ್ಟರ್ 25 ವರ್ಷಗಳಿಂದ ಸಕ್ರಿಯ ರಾಜಕೀಯದಲ್ಲಿ ಇದ್ದಾರೆ. ಆದರೂ ಅವರಿಂದ ರಸ್ತೆ ಸರಿಪಡಿಸಲು ಸಾಧ್ಯವಾಗಿಲ್ಲ. ಕೂಡಲೇ ಗುಂಡಿ ಹಾಗೂ ದೂಳು ಮುಕ್ತ ನಗರವಾಗಬೇಕು ಎಂದು ಆಗ್ರಹಿಸಿದರು.