ಹುಬ್ಬಳ್ಳಿ: ಇಲ್ಲಿನ ಗಿರಣಿಚಾಳ ಮೈದಾನದಲ್ಲಿ ನಿಲ್ಲಿಸಿದ್ದ ಶ್ರೀಕಾಂತ ಬಾರಕೇರ್ ಅವರ ಶಿಫ್ಟ್ ಕಾರು ಧಗಧಗನೆ ಹೊತ್ತಿ ಉರಿದಿದೆ.
ಸ್ಥಳೀಯ ನಿವಾಸಿ ಶ್ರೀಕಾಂತ ಅವರು ಶನಿವಾರ ರಾತ್ರಿ ಮೈದಾನದಲ್ಲಿ ಕಾರು ನಿಲ್ಲಿಸಿದ್ದರು. ಯಾರೋ ಕಿಡಿಗೇಡಿಗಳು ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.