ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28ರಿಂದ ಹುಬ್ಬಳ್ಳಿ–ಗಂಗಾವತಿ ರೈಲು ಪುನರಾರಂಭ

Last Updated 24 ಜೂನ್ 2021, 15:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೋವಿಡ್‌ ಪ್ರಕರಣಗಳು ಹೆಚ್ಚಿದ್ದ ಕಾರಣಕ್ಕಾಗಿ ರದ್ದಾಗಿದ್ದ ಹುಬ್ಬಳ್ಳಿ–ಗಂಗಾವತಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಜೂ. 28ರಿಂದ ಪುನರಾರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಈ ರೈಲು 29ರಿಂದ ಗಂಗಾವತಿಯಿಂದ ಸಂಚರಿಸಲಿದೆ.

ಹೊಸಪೇಟೆ–ಹರಿಹರ ವಿಶೇಷ ರೈಲು 29ರಿಂದ ಹೊಸಪೇಟೆಯಿಂದ, 30ರಿಂದ ಹರಿಹರದಿಂದ ಆರಂಭವಾಗಲಿದೆ. ಈ ರೈಲುಗಳಿಗೆ ನಿಲ್ದಾಣಗಳಲ್ಲಿಯೇ ಟಿಕೆಟ್‌ ಪಡೆದು ಪ್ರಯಾಣಿಸಬೇಕು.

28ರಿಂದ ಹುಬ್ಬಳ್ಳಿಯಿಂದ ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ ವಿಶೇಷ ರೈಲು ಸಂಚಾರ ಆರಂಭವಾಗಲಿದೆ. ಈ ರೈಲು 30ರಿಂದ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಲಿದೆ.

29ರಿಂದ ಕೆಎಸ್‌ಆರ್‌ ಬೆಂಗಳೂರಿನಿಂದ–ಹೊಸಪೇಟೆಗೆ ಮತ್ತು 30ರಿಂದ ಹೊಸಪೇಟೆಯಿಂದ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಲಿದೆ. ಈ ರೈಲುಗಳಲ್ಲಿ ಪ್ರಯಾಣಿಸಲು ಮುಂಗಡ ಟಿಕೆಟ್‌ ಪಡೆಯಬೇಕು. ಪ್ರಯಾಣಿಕರು ಕೋವಿಡ್‌ ನಿಯಮಾವಳಿಗಳನ್ನು ಕಡ್ಡಾಯಬಾಗಿ ಪಾಲಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT