ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ ಈದ್ಗಾ ಮೈದಾನ | ಉತ್ಸವಕ್ಕೆ ಷರತ್ತುಬದ್ಧ ಅವಕಾಶ: ಡಿ.ಸಿ

Last Updated 31 ಆಗಸ್ಟ್ 2022, 3:43 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ನಗರದ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಷಯ ಮಹಾನಗರ ಪಾಲಿಕೆ ಆಯುಕ್ತರ ವಿವೇಚನೆಗೆ ಬಿಟ್ಟಿದ್ದು ಎಂದು ಹೈಕೋರ್ಟ್ ಷರತ್ತು ಬದ್ಧ ಆದೇಶ ನೀಡಿದೆ. ಅದನ್ವಯ ಆಯುಕ್ತರು ಒಂದು ಸಮಿತಿಗೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದ್ದಾರೆ' ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಮಂಗಳವಾರ ತಡರಾತ್ರಿ ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

'ಕೋರ್ಟ್ ಆದೇಶದ ಪ್ರಕಾರ ಸೆ. 2ರ ಬೆಳಿಗ್ಗೆ 11ರವರೆಗೆ ಗಣೇಶ ಉತ್ಸವಕ್ಕೆ ಅವಕಾಶ ನೀಡಲಾಗಿದೆ. ಸಾಕಷ್ಟು ಷರತ್ತು ವಿಧಿಸಿದ್ದು, ಸಮಿತಿ ಅವುಗಳನ್ನು ಪಾಲಿಸಬೇಕು. ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಮಾಡಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡಲಾಗುವುದು' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT