<p><strong>ಹುಬ್ಬಳ್ಳಿ</strong>: ಇಲ್ಲಿನ ಸಿದ್ಧೇಶ್ವರ ಪಾರ್ಕ್ನಲ್ಲಿರುವ ಶಿವಸಾಗರ ಹೋಟೆಲ್ನಲ್ಲಿ ಅನಧಿಕೃವಾಗಿ ಸಂಗ್ರಹಿಸಿಟ್ಟಿದ್ದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p>.<p>ಪೊಲೀಸರ ಸಹಕಾರದೊಂದಿಗೆ ಭಾನುವಾರ ತಡರಾತ್ರಿ ದಾಳಿ ನಡೆಸಿದ ಅಧಿಕಾರಿಗಳು, ಅನಿಲ ತುಂಬಿದ 25 ಸಿಲಿಂಡರ್ಗಳನ್ನು ಪತ್ತೆಹಚ್ಚಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆಯಡಿ ಹೋಟೆಲ್ ಸಹ ಮಾಲೀಕ ಸತೀಶ ಬಂಡಿ ವಿರುದ್ಧ ಆಹಾರ ನಿರೀಕ್ಷಕ ವಿಜಯಕುಮಾರ ಪತ್ತಾರ ದೂರು ದಾಖಲಿಸಿದ್ದಾರೆ.</p>.<p>‘ಗೋ ಗ್ಯಾಸ್ ಕಂಪನಿಯಿಂದ ಪೂರೈಕೆಯಾಗುವ ಅನಿಲ ಸಿಲಿಂಡರ್ಗಳನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಲಾಗಿತ್ತು. ಎಲ್ಲಿಂದ ಪೂರೈಕೆ ಆಗಿದೆ ಎನ್ನುವ ಕುರಿತು ತನಿಖೆ ನಡೆಯುತ್ತಿದೆ’ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ವಿಜಯಕುಮಾರ ಹೆಗ್ಗಳಗಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಇಲ್ಲಿನ ಸಿದ್ಧೇಶ್ವರ ಪಾರ್ಕ್ನಲ್ಲಿರುವ ಶಿವಸಾಗರ ಹೋಟೆಲ್ನಲ್ಲಿ ಅನಧಿಕೃವಾಗಿ ಸಂಗ್ರಹಿಸಿಟ್ಟಿದ್ದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p>.<p>ಪೊಲೀಸರ ಸಹಕಾರದೊಂದಿಗೆ ಭಾನುವಾರ ತಡರಾತ್ರಿ ದಾಳಿ ನಡೆಸಿದ ಅಧಿಕಾರಿಗಳು, ಅನಿಲ ತುಂಬಿದ 25 ಸಿಲಿಂಡರ್ಗಳನ್ನು ಪತ್ತೆಹಚ್ಚಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆಯಡಿ ಹೋಟೆಲ್ ಸಹ ಮಾಲೀಕ ಸತೀಶ ಬಂಡಿ ವಿರುದ್ಧ ಆಹಾರ ನಿರೀಕ್ಷಕ ವಿಜಯಕುಮಾರ ಪತ್ತಾರ ದೂರು ದಾಖಲಿಸಿದ್ದಾರೆ.</p>.<p>‘ಗೋ ಗ್ಯಾಸ್ ಕಂಪನಿಯಿಂದ ಪೂರೈಕೆಯಾಗುವ ಅನಿಲ ಸಿಲಿಂಡರ್ಗಳನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಲಾಗಿತ್ತು. ಎಲ್ಲಿಂದ ಪೂರೈಕೆ ಆಗಿದೆ ಎನ್ನುವ ಕುರಿತು ತನಿಖೆ ನಡೆಯುತ್ತಿದೆ’ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ವಿಜಯಕುಮಾರ ಹೆಗ್ಗಳಗಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>