<p><strong>ಹುಬ್ಬಳ್ಳಿ</strong>: ‘ಈ ಹಿಂದೆ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತಂದಿತ್ತು. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಈಗ ನಮ್ಮ ಸರ್ಕಾರ ಮತ್ತೆ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುತ್ತಿದೆ’ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 64ನೇ ವಾರ್ಡ್ನ ತಬೀಬ್ ಲ್ಯಾಂಡ್ ಬಡಾವಣೆಯಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಮಾತನಾಡಿದರು.</p>.<p>‘ಪೂರ್ವ ವಿಧಾನಸಭಾ ಕ್ಷೇತ್ರದ ಸೋನಿಯಾಗಾಂಧಿ ನಗರ, ಎಸ್.ಎಂ.ಕೃಷ್ಣ ನಗರ, ಶಿವಶಂಕರ ಕಾಲೊನಿ ಸೇರಿದಂತೆ ಐದು ಕಡೆ ಕ್ಯಾಂಟೀನ್ ಸ್ಥಾಪಿಸಲಾಗಿದ್ದು, ಇನ್ನೂ ಕೆಲವು ಬಡಾವಣೆಗಳಲ್ಲಿ ಕ್ಯಾಂಟೀನ್ ತೆರೆಯುವ ಚಿಂತನೆ ಇದೆ’ ಎಂದರು.</p>.<p>‘ಇಂದಿರಾ ಕ್ಯಾಂಟೀನ್ಗಳಲ್ಲಿ ಕಡಿಮೆ ದರದಲ್ಲಿ ಬಡವರು, ಕೂಲಿ ಕಾರ್ಮಿಕರು, ಆಟೊ ಚಾಲಕರಿಗೆ ಉತ್ತಮ ಗುಣಮಟ್ಟದ ಊಟ, ಉಪಾಹಾರ ಸಿಗುವುದರಿಂದ ಹೆಚ್ಚು ಅನುಕೂಲವಾಗಿದೆ’ ಎಂದರು.</p>.<p>ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಅಧಿಕಾರಿಗಳಾದ ವಿಜಯಕುಮಾರ್, ಮಲ್ಲಿಕಾರ್ಜುನ, ಮುಖಂಡರಾದ ಆಸೀಫ್ ಇಕ್ಬಾಲ್ ಬಳ್ಳಾರಿ, ಶರೀಫ್ ಅದ್ವಾನಿ, ಅಬ್ಬಾಸ ಕುಮಟಾಕರ್, ಅಫ್ರೋಜ್ ಮಂಚಿನಕೊಪ್ಪ, ಶ್ರೀನಿವಾಸ ಬೆಳದಡಿ, ಆರಿಫ್ ದೊಡ್ಡಮನಿ, ಮದನ್ ಬಚನ್, ಜಾಫರ್ ಶಾಬ್ದಿ, ಅಕ್ಬರ್ ಅಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಈ ಹಿಂದೆ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತಂದಿತ್ತು. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಈಗ ನಮ್ಮ ಸರ್ಕಾರ ಮತ್ತೆ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುತ್ತಿದೆ’ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 64ನೇ ವಾರ್ಡ್ನ ತಬೀಬ್ ಲ್ಯಾಂಡ್ ಬಡಾವಣೆಯಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಮಾತನಾಡಿದರು.</p>.<p>‘ಪೂರ್ವ ವಿಧಾನಸಭಾ ಕ್ಷೇತ್ರದ ಸೋನಿಯಾಗಾಂಧಿ ನಗರ, ಎಸ್.ಎಂ.ಕೃಷ್ಣ ನಗರ, ಶಿವಶಂಕರ ಕಾಲೊನಿ ಸೇರಿದಂತೆ ಐದು ಕಡೆ ಕ್ಯಾಂಟೀನ್ ಸ್ಥಾಪಿಸಲಾಗಿದ್ದು, ಇನ್ನೂ ಕೆಲವು ಬಡಾವಣೆಗಳಲ್ಲಿ ಕ್ಯಾಂಟೀನ್ ತೆರೆಯುವ ಚಿಂತನೆ ಇದೆ’ ಎಂದರು.</p>.<p>‘ಇಂದಿರಾ ಕ್ಯಾಂಟೀನ್ಗಳಲ್ಲಿ ಕಡಿಮೆ ದರದಲ್ಲಿ ಬಡವರು, ಕೂಲಿ ಕಾರ್ಮಿಕರು, ಆಟೊ ಚಾಲಕರಿಗೆ ಉತ್ತಮ ಗುಣಮಟ್ಟದ ಊಟ, ಉಪಾಹಾರ ಸಿಗುವುದರಿಂದ ಹೆಚ್ಚು ಅನುಕೂಲವಾಗಿದೆ’ ಎಂದರು.</p>.<p>ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಅಧಿಕಾರಿಗಳಾದ ವಿಜಯಕುಮಾರ್, ಮಲ್ಲಿಕಾರ್ಜುನ, ಮುಖಂಡರಾದ ಆಸೀಫ್ ಇಕ್ಬಾಲ್ ಬಳ್ಳಾರಿ, ಶರೀಫ್ ಅದ್ವಾನಿ, ಅಬ್ಬಾಸ ಕುಮಟಾಕರ್, ಅಫ್ರೋಜ್ ಮಂಚಿನಕೊಪ್ಪ, ಶ್ರೀನಿವಾಸ ಬೆಳದಡಿ, ಆರಿಫ್ ದೊಡ್ಡಮನಿ, ಮದನ್ ಬಚನ್, ಜಾಫರ್ ಶಾಬ್ದಿ, ಅಕ್ಬರ್ ಅಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>