ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮಯೂರೋತ್ಸವದಲ್ಲಿ ಪದ್ಮಶ್ರೀ ಪುರಸ್ಕೃತ, ಹಿರಿಯ ಗಾಯಕ ಡಾ. ಎಂ. ವೆಂಕಟೇಶಕುಮಾರ ಅವರಿಗೆ ಮಯೂರ ಸನ್ಮಾನ ಮಾಡಲಾಗುವುದು. ಧಾರವಾಡ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕಕಮಾರ ಬೆಕ್ಕೇರಿ, ಉದ್ಯಮಿ ಡಾ. ವಿ.ಎಸ್.ವಿ. ಪ್ರಸಾದ್, ಎಲ್.ಐ.ಸಿ. ಹುಬ್ಬಳ್ಳಿ ಕಚೇರಿ ವ್ಯವಸ್ಥಾಪಕ ಶಂಕರ ಹೆಗಡೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ' ಎಂದರು.