ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ: ಅಂಜಲಿ‌ ಕುಟುಂಬಕ್ಕೆ ಸಚಿವ ಸಂತೋಷ್ ಲಾಡ್ ಆರ್ಥಿಕ ನೆರವು

ಈಚೆಗೆ ಕೊಲೆಯಾದ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಅವರ‌ ಮನೆಗೆ ಜಿಲ್ಲಾ‌ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶನಿವಾರ ಭೇಟಿ‌ ನೀಡಿ ಕುಟುಂಬದವರಿಗೆ ಸಾಂತ್ವನ‌ ಹೇಳಿದರು.
Published 18 ಮೇ 2024, 6:11 IST
Last Updated 18 ಮೇ 2024, 6:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಈಚೆಗೆ ಕೊಲೆಯಾದ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಅವರ‌ ಮನೆಗೆ ಜಿಲ್ಲಾ‌ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶನಿವಾರ ಭೇಟಿ‌ ನೀಡಿ ಕುಟುಂಬದವರಿಗೆ ಸಾಂತ್ವನ‌ ಹೇಳಿದರು.

ಅಂಜಲಿ ಅವರ ಅಜ್ಜಿ‌ ಗಂಗಮ್ಮ ಮತ್ತು ಸಹೋದರಿಯರಿಗೆ ಧೈರ್ಯ ಹೇಳಿದ ಲಾಡ್, ಸಂತೋಷ್ ಲಾಡ್ ಫೌಂಡೇಷನ್‌ನಿಂದ ₹2 ಲಕ್ಷ ಚೆಕ್ ನೀಡಿದರು.

ಲಾಡ್ ಭೇಟಿಗೆ ವಿರೋಧ: ಅಂಜಲಿ ಮನೆಗೆ ಭೇಟಿ ನೀಡಿದ‌ ಸಚಿವ ಸಂತೋಷ್ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ ಅವರನ್ನು ಬಿಜೆಪಿ ಮುಖಂಡ ಅನೂಪ್‌ ಬಿಜವಾಡ ಸೇರಿದಂತೆ ಸ್ಥಳೀಯರು ತರಾಟೆಗೆ ತೆಗೆದುಕೊಂಡರು.

'ಕೊಲೆಯಾಗಿ ಮೂರು ದಿನ ಆಗಿದೆ. ಇಷ್ಟು ದಿನ ಎಲ್ಲಿ ಹೋಗಿದ್ದಿರಿ. ಈಗ ಏಕೆ‌ ಬಂದಿದ್ದೀರಿ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT