<p>ಹುಬ್ಬಳ್ಳಿ: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನ ಹುಬ್ಬಳ್ಳಿ ಪ್ರಾದೇಶಿಕ ಕೇಂದ್ರದಲ್ಲಿ 69ನೇ ಕನ್ನಡ ರಾಜ್ಯೋತ್ಸವ, ಎಂ.ಪಿ.ಎ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿಶೇಷ ಸಿಂಡಿಕೇಟ್ ಸಭೆ ನಡೆಸಲಾಯಿತು.</p>.<p>ಕುಲಪತಿ ಪ್ರೊ.ನಾಗೇಶ್.ವಿ.ಬೆಟ್ಟಕೋಟೆ ಮಾತನಾಡಿ, ‘ವಿಶ್ವವಿದ್ಯಾಲಯದ ಈ ಪ್ರಾದೇಶಿಕ ಕೇಂದ್ರವನ್ನು ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನ ಪಡೆದು, ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಈ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದರು.</p>.<p>ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ, ರಂಗಗೀತೆ ಗಾಯನ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯನ ಗೋಷ್ಠಿ ನಡೆಯಿತು.</p>.<p>ವಿಧಾನ ಪರಿಷತ್ ಸದಸ್ಯ ಮತ್ತು ಸಿಂಡಿಕೇಟ್ ಸದಸ್ಯ ಎಚ್.ಎಸ್.ಗೋಪಿನಾಥ ಮಾತನಾಡಿ, ‘ಸಂಗೀತ, ನಾಟಕ, ಭರತನಾಟ್ಯ ಹಾಗೂ ಇನ್ನಿತರ ಸಾಂಸ್ಕೃತಿಕ ಕಲೆಗಳು ವ್ಯಾಪಕವಾಗಿ ವಿಸ್ತಾರಗೊಂಡು ಈ ವಿಶ್ವವಿದ್ಯಾಲಯದ ಘನತೆಯನ್ನು ದೇಶದಲ್ಲಿ ಪಸರಿಸಬೇಕು. ಅತ್ಯುತ್ತಮವಾಗಿ ಕಲಾ ಪ್ರದರ್ಶನ ಮಾಡಿದ ವಿದ್ಯಾರ್ಥಿಗಳು ಅಭಿನಂದನೆಗೆ ಅರ್ಹರು‘ ಎಂದು ಶ್ಲಾಘಿಸಿದರು.</p>.<p>ಸಿಂಡಿಕೇಟ್ ಸದಸ್ಯೆ ದೀಪಿಕಾ ಶ್ರೀಕಾಂತ ಮಾತನಾಡಿದರು. ಕಲಾವಿದರಾದ ಟಿ.ರವೀಂದ್ರ ಶರ್ಮಾ, ವೈಷ್ಣವಿ ಹಾನಗಲ್, ಡಾ.ಶಶಿಧರ ನರೇಂದ್ರ ಅವರನ್ನು ಸನ್ಮಾನಿಸಲಾಯಿತು.</p>.<p>ಕಾತ್ಯಾಯಿನಿ ನಿರೂಪಿಸಿದರು. ಮಾರಣ್ಣ.ಬಿ.ಆರ್ ಸ್ವಾಗತಿಸಿದರು. ಸುಜಯ್ ಶಾನಭಾಗ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನ ಹುಬ್ಬಳ್ಳಿ ಪ್ರಾದೇಶಿಕ ಕೇಂದ್ರದಲ್ಲಿ 69ನೇ ಕನ್ನಡ ರಾಜ್ಯೋತ್ಸವ, ಎಂ.ಪಿ.ಎ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿಶೇಷ ಸಿಂಡಿಕೇಟ್ ಸಭೆ ನಡೆಸಲಾಯಿತು.</p>.<p>ಕುಲಪತಿ ಪ್ರೊ.ನಾಗೇಶ್.ವಿ.ಬೆಟ್ಟಕೋಟೆ ಮಾತನಾಡಿ, ‘ವಿಶ್ವವಿದ್ಯಾಲಯದ ಈ ಪ್ರಾದೇಶಿಕ ಕೇಂದ್ರವನ್ನು ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನ ಪಡೆದು, ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಈ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದರು.</p>.<p>ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ, ರಂಗಗೀತೆ ಗಾಯನ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯನ ಗೋಷ್ಠಿ ನಡೆಯಿತು.</p>.<p>ವಿಧಾನ ಪರಿಷತ್ ಸದಸ್ಯ ಮತ್ತು ಸಿಂಡಿಕೇಟ್ ಸದಸ್ಯ ಎಚ್.ಎಸ್.ಗೋಪಿನಾಥ ಮಾತನಾಡಿ, ‘ಸಂಗೀತ, ನಾಟಕ, ಭರತನಾಟ್ಯ ಹಾಗೂ ಇನ್ನಿತರ ಸಾಂಸ್ಕೃತಿಕ ಕಲೆಗಳು ವ್ಯಾಪಕವಾಗಿ ವಿಸ್ತಾರಗೊಂಡು ಈ ವಿಶ್ವವಿದ್ಯಾಲಯದ ಘನತೆಯನ್ನು ದೇಶದಲ್ಲಿ ಪಸರಿಸಬೇಕು. ಅತ್ಯುತ್ತಮವಾಗಿ ಕಲಾ ಪ್ರದರ್ಶನ ಮಾಡಿದ ವಿದ್ಯಾರ್ಥಿಗಳು ಅಭಿನಂದನೆಗೆ ಅರ್ಹರು‘ ಎಂದು ಶ್ಲಾಘಿಸಿದರು.</p>.<p>ಸಿಂಡಿಕೇಟ್ ಸದಸ್ಯೆ ದೀಪಿಕಾ ಶ್ರೀಕಾಂತ ಮಾತನಾಡಿದರು. ಕಲಾವಿದರಾದ ಟಿ.ರವೀಂದ್ರ ಶರ್ಮಾ, ವೈಷ್ಣವಿ ಹಾನಗಲ್, ಡಾ.ಶಶಿಧರ ನರೇಂದ್ರ ಅವರನ್ನು ಸನ್ಮಾನಿಸಲಾಯಿತು.</p>.<p>ಕಾತ್ಯಾಯಿನಿ ನಿರೂಪಿಸಿದರು. ಮಾರಣ್ಣ.ಬಿ.ಆರ್ ಸ್ವಾಗತಿಸಿದರು. ಸುಜಯ್ ಶಾನಭಾಗ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>