<p><strong>ಹುಬ್ಬಳ್ಳಿ: </strong>ನಂಗೆ ಕೊರೊನಾ ಸೋಂಕು ದೃಢವಾಗಿದೆ. ದಯವಿಟ್ಟು ಆಸ್ಪತ್ರೆಗೆ ಸೇರಿಸಿ...</p>.<p>ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಭಾನುವಾರದ ಲಾಕ್ ಡೌನ್ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರಿಗೆ ಹೀಗೆ ಗೊಗೆರೆದಿದ್ದು ಉತ್ತರ ಪ್ರದೇಶದ ವ್ಯಕ್ತಿ.</p>.<p>ಈ ವ್ಯಕ್ತಿ ಎರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ. ಶನಿವಾರ ರಾತ್ರಿ ಪಾಸಿಟಿವ್ ಎಂದು ವರದಿ ಬಂದಿದ್ದು, ನಗರದ ಹಳೆಯ ಬಸ್ ನಿಲ್ದಾಣ ಎದುರು ಇರುವ ಲಾಡ್ಜ್ ನಲ್ಲಿ ತಂಗಿದ್ದ.</p>.<p>ನನಗೆ ಕೊರೊನಾ ಇದೆ ಎಂದು ಶನಿವಾರ ರಾತ್ರಿ ಆಸ್ಪತ್ರೆಯಿಂದ ಮಾಹಿತಿ ಬಂದಿದೆ. ಪೋನ್ ಮಾಡಿ ನನ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಅಂಗಲಾಚಿದರೂ ಯಾರೂ ಬಂದಿಲ್ಲ. ಅದಕ್ಕೆ ನಿಮಗೆ ವಿಷಯ ತಿಳಿಸಲು ಬಂದಿದ್ದೇನೆ ಎಂದು ಪೊಲೀಸರ ಬಳಿ ಸೋಂಕಿತ ವ್ಯಕ್ತಿ ಹೇಳಿಕೊಂಡಿದ್ದಾನೆ.</p>.<p>ಇದರಿಂದ ಗಾಬರಿಗೊಂಡ ಪೊಲೀಸರು ದೂರದಿಂದಲೇ ಗದರಿಸಿ ಹೋಟೆಲ್ ಒಳಗೆ ಹೋಗುವಂತೆ ಆ ವ್ಯಕ್ತಿಗೆ ಹೇಳಿದರು. ಪೊಲೀಸರು ಆಸ್ಪತ್ರೆ ಸಿಬ್ಬಂದಿಗೆ ಮಾಹಿತಿ ನೀಡಿದ ಬಳಿಕ ಅವರು ಅಂಬುಲೆನ್ಸ್ ನಲ್ಲಿ ಸೋಂಕಿತ ವ್ಯಕ್ತಿಯನ್ನು ಕರೆದುಕೊಂಡು ಹೋದರು. ಇದರಿಂದ ಚನ್ನಮ್ಮ ವೃತ್ತದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಂಗೆ ಕೊರೊನಾ ಸೋಂಕು ದೃಢವಾಗಿದೆ. ದಯವಿಟ್ಟು ಆಸ್ಪತ್ರೆಗೆ ಸೇರಿಸಿ...</p>.<p>ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಭಾನುವಾರದ ಲಾಕ್ ಡೌನ್ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರಿಗೆ ಹೀಗೆ ಗೊಗೆರೆದಿದ್ದು ಉತ್ತರ ಪ್ರದೇಶದ ವ್ಯಕ್ತಿ.</p>.<p>ಈ ವ್ಯಕ್ತಿ ಎರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ. ಶನಿವಾರ ರಾತ್ರಿ ಪಾಸಿಟಿವ್ ಎಂದು ವರದಿ ಬಂದಿದ್ದು, ನಗರದ ಹಳೆಯ ಬಸ್ ನಿಲ್ದಾಣ ಎದುರು ಇರುವ ಲಾಡ್ಜ್ ನಲ್ಲಿ ತಂಗಿದ್ದ.</p>.<p>ನನಗೆ ಕೊರೊನಾ ಇದೆ ಎಂದು ಶನಿವಾರ ರಾತ್ರಿ ಆಸ್ಪತ್ರೆಯಿಂದ ಮಾಹಿತಿ ಬಂದಿದೆ. ಪೋನ್ ಮಾಡಿ ನನ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಅಂಗಲಾಚಿದರೂ ಯಾರೂ ಬಂದಿಲ್ಲ. ಅದಕ್ಕೆ ನಿಮಗೆ ವಿಷಯ ತಿಳಿಸಲು ಬಂದಿದ್ದೇನೆ ಎಂದು ಪೊಲೀಸರ ಬಳಿ ಸೋಂಕಿತ ವ್ಯಕ್ತಿ ಹೇಳಿಕೊಂಡಿದ್ದಾನೆ.</p>.<p>ಇದರಿಂದ ಗಾಬರಿಗೊಂಡ ಪೊಲೀಸರು ದೂರದಿಂದಲೇ ಗದರಿಸಿ ಹೋಟೆಲ್ ಒಳಗೆ ಹೋಗುವಂತೆ ಆ ವ್ಯಕ್ತಿಗೆ ಹೇಳಿದರು. ಪೊಲೀಸರು ಆಸ್ಪತ್ರೆ ಸಿಬ್ಬಂದಿಗೆ ಮಾಹಿತಿ ನೀಡಿದ ಬಳಿಕ ಅವರು ಅಂಬುಲೆನ್ಸ್ ನಲ್ಲಿ ಸೋಂಕಿತ ವ್ಯಕ್ತಿಯನ್ನು ಕರೆದುಕೊಂಡು ಹೋದರು. ಇದರಿಂದ ಚನ್ನಮ್ಮ ವೃತ್ತದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>