ಹುಬ್ಬಳ್ಳಿ: ಕರ್ತವ್ಯ ನಿರತ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.
ಬುಧವಾರ ಹಾಲು ವಿತರಣೆ ಕಾರ್ಯದ ಮೇಲೆ ತೆರಳುತ್ತಿದ್ದ ಪಾಲಿಕೆ ಅಧಿಕಾರಿಯನ್ನು ತಡೆದು ಥಳಿಸಿದ್ದಾರೆ. ಹಳೇ ಹುಬ್ಬಳ್ಳಿಯ ಹೆಗ್ಗೇರಿ ಕ್ರಾಸ್ ಬಳಿ ಈ ಘಟನೆ ನಡೆದಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿ-9ರ ಸಹಾಯಕ ಕಂದಾಯ ಅಧಿಕಾರಿ ಎನ್.ಕೆ. ಅಂಗಡಿ ಎಂಬುವರೇ ಹಲ್ಲೆಗೊಳಗಾದ ಅಧಿಕಾರಿ. ಪೊಲೀಸರು ಹೊಡೆದಿರುವುದು ನಿಜ. ವಿಷಯವನ್ನು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ ಗಮನಕ್ಕೆ ತರಲಾಗಿದೆ ಎಂದು ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ತಿಳಿಸಿದರು.