<p><strong>ಹುಬ್ಬಳ್ಳಿ</strong>: ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾದ ಆಟೊ, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿದ ₹5ಸಾವಿರ ಪರಿಹಾರ ಇನ್ನೂ ತಲುಪಿಲ್ಲ. ಕೂಡಲೇ ಅದನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಆಟೊ ರಿಕ್ಷಾ ಮಾಲೀಕರ, ಚಾಲಕರ ಸಂಘದ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು ಮಿನಿವಿಧಾನ ಸೌಧಕ್ಕೆ ತೆರಳಿ ತಹಶೀಲ್ದಾರ್'ಗೆ ಮನವಿ ಸಲ್ಲಿಸಿದರು.</p>.<p>ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಮಾರ್ಚ್'ನಿಂದ ಜೂನ್'ವರೆಗೆ ದುಡಿಮೆಯಿಲ್ಲದೆ ಸಂಕಷ್ಟದ ಪರಿಸ್ಥಿತಿ ಎದುರಿಸಿದ್ದೇವೆ. ಆ ವೇಳೆ ಸರ್ಕಾರ ಪರಿಹಾರವೆಂದು ₹5ಸಾವಿರ ಘೋಷಣೆ ಮಾಡಿತ್ತು. ಸರ್ಕಾರದ ಮಾರ್ಸೂಚಿಯಂತೆ ಅರ್ಜಿ ಸಲ್ಲಿಸಿದ್ದರೂ, ಕೇವಲ ಶೇ 10 ರಷ್ಟು ಮಂದಿಗೆ ಮಾತ್ರ ಪರಿಹಾರ ದೊರಕಿದೆ. ಉಳಿದವರಿಗೆ ಇನ್ನೂ ಪರಿಹಾರ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲ ಅರ್ಹರಿಗೂ ಏಕಕಾಲದಲ್ಲಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಒತ್ತಾಯಿಸಿದರು.</p>.<p>ಲೋಕೇಶ ಚಿಕ್ಕಮಂಗಳೂರು, ಮೋದಿನಸಾಬ್ ದೋಣಿ, ದಾವಕಸಾಬ್ ಕುರಹಟ್ಟಿ, ಮಹಾವೀರ ಬಿಲಾನ, ಗುರು ಬೆಟಗೇರಿ, ಹನುಮಂತ ಮುಳಗುಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾದ ಆಟೊ, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿದ ₹5ಸಾವಿರ ಪರಿಹಾರ ಇನ್ನೂ ತಲುಪಿಲ್ಲ. ಕೂಡಲೇ ಅದನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಆಟೊ ರಿಕ್ಷಾ ಮಾಲೀಕರ, ಚಾಲಕರ ಸಂಘದ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು ಮಿನಿವಿಧಾನ ಸೌಧಕ್ಕೆ ತೆರಳಿ ತಹಶೀಲ್ದಾರ್'ಗೆ ಮನವಿ ಸಲ್ಲಿಸಿದರು.</p>.<p>ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಮಾರ್ಚ್'ನಿಂದ ಜೂನ್'ವರೆಗೆ ದುಡಿಮೆಯಿಲ್ಲದೆ ಸಂಕಷ್ಟದ ಪರಿಸ್ಥಿತಿ ಎದುರಿಸಿದ್ದೇವೆ. ಆ ವೇಳೆ ಸರ್ಕಾರ ಪರಿಹಾರವೆಂದು ₹5ಸಾವಿರ ಘೋಷಣೆ ಮಾಡಿತ್ತು. ಸರ್ಕಾರದ ಮಾರ್ಸೂಚಿಯಂತೆ ಅರ್ಜಿ ಸಲ್ಲಿಸಿದ್ದರೂ, ಕೇವಲ ಶೇ 10 ರಷ್ಟು ಮಂದಿಗೆ ಮಾತ್ರ ಪರಿಹಾರ ದೊರಕಿದೆ. ಉಳಿದವರಿಗೆ ಇನ್ನೂ ಪರಿಹಾರ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲ ಅರ್ಹರಿಗೂ ಏಕಕಾಲದಲ್ಲಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಒತ್ತಾಯಿಸಿದರು.</p>.<p>ಲೋಕೇಶ ಚಿಕ್ಕಮಂಗಳೂರು, ಮೋದಿನಸಾಬ್ ದೋಣಿ, ದಾವಕಸಾಬ್ ಕುರಹಟ್ಟಿ, ಮಹಾವೀರ ಬಿಲಾನ, ಗುರು ಬೆಟಗೇರಿ, ಹನುಮಂತ ಮುಳಗುಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>