ಹುಬ್ಬಳ್ಳಿ: ಆದಾಯ ತೆರಿಗೆ ವ್ಯಾಪ್ತಿಗೆ ಬರದ ಎಲ್ಲ ಕುಟುಂಗಳಿಗೆ ಮೂರು ತಿಂಗಳವರಗೆ ಪ್ರತಿ ತಿಂಗಳು ₹7,500 ಸಹಾಯ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಆಗ್ರಹಿಸಿ ಪ್ರತಿಭಟನೆ ನಡೆಸಿತು.
ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಬೇಕು. ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೂಲಿ ಹೆಚ್ಚಿಸುವುದರೊಂದಿಗೆ 200 ದಿನಗಳಿಗೆ ಕೂಲಿ ನೀಡಬೇಕು. ಲಾಕ್ಡೌನ್ ಅವಧಿಯ ಸಂಬಳ ಪಾವತಿಸಬೇಕು ಎಂದು ಆಗ್ರಹಿಸಿದರು.
ಖಾಸಗೀಕರಣವನ್ನು ಸಂಪೂರ್ಣವಾಗಿ ಕೈಬಿಡಬೇಕು. ವಿದ್ಯುತ್ ತಿದ್ದುಪಡಿ ಮಸೂದೆ ಕೈಬಿಡಬೇಕು. ಕಾರ್ಮಿಕ ಕಾನೂನಿಗೆ ತಿದ್ದುಪಡಿ ಮಾಡಬಾರದು ಎಂದು ಒತ್ತಾಯಿಸಿದರು.