<p><strong>ಹುಬ್ಬಳ್ಳಿ:</strong> ಕೋವಿಡ್–19 ದೃಢಪಟ್ಟವರಿಗೆ ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಹಾಸಿಗೆ ದೊರೆಯುತ್ತಿಲ್ಲ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಸೋಂಕಿತರಿಗೆ ಚಿಕಿತ್ಸೆಗೆಂದೇ ನೈರುತ್ಯ ರೈಲ್ವೆ ವಲಯ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈಲ್ವೆ ಬೋಗಿಗಳಲ್ಲಿ ಸಿದ್ಧಪಡಿಸಿದ ಹಾಸಿಗೆಗಳನ್ನು ಬಳಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿಲ್ಲ.</p>.<p>ನೈರುತ್ಯ ರೈಲ್ವೆಯು 312 ಬೋಗಿಗಳನ್ನು ಐಸೊಲೇಷನ್ (ಪ್ರತ್ಯೇಕಿಸಲಾದ ವಾರ್ಡ್) ಮತ್ತು ತೀವ್ರ ನಿಗಾ ಘಟಕಗಳನ್ನಾಗಿ (ಐಸಿಯು) ಪರಿವರ್ತಿಸಿದೆ. ಸೋಂಕಿತರು ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿ ಒಟ್ಟು 2,496 ಮಂದಿ ಈ ಬೋಗಿಗಳಲ್ಲಿರಬಹುದಾಗಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೋಗಿಗಳನ್ನು ಕೋವಿಡ್– 19 ರೋಗಿಗಳಿಗೆ ಬೇಕಾದಂತೆ ಸಿದ್ಧಪಡಿಸಲು ಪ್ರತಿ ಬೋಗಿಗೆ ಅಂದಾಜು ₹ 30 ಸಾವಿರ ಖರ್ಚು ಮಾಡಲಾಗಿದೆ. ಏಪ್ರಿಲ್ನಲ್ಲಿಯೇ ಬೋಗಿಗಳು ಸಿದ್ಧವಾಗಿವೆ. ಇದುವರೆಗೆ ರಾಜ್ಯದ ಆರೋಗ್ಯ ಇಲಾಖೆ ಬೋಗಿಗೆ ಬೇಡಿಕೆ ಸಲ್ಲಿಸಿಲ್ಲ. ಸಲ್ಲಿಸಿದರೆ, ನೀಡಲಾಗುವುದು’ ಎಂದರು.</p>.<p>‘ರೈಲ್ವೆ ಬೋಗಿಗಳಲ್ಲಿ ಸ್ಲೀಪರ್ ಸೀಟುಗಳನ್ನೇ ಹಾಸಿಗೆಗಳನ್ನಾಗಿ ಪರಿವರ್ತಿಸಲಾಗಿದೆ. ಅಲ್ಲಿ ಚಿಕಿತ್ಸೆ ನೀಡುವುದು ಕಷ್ಟ. ವೈದ್ಯಕೀಯ ಸಾಮಗ್ರಿಗಳ ಕೊರತೆ ಇದೆ. ಚಿಕಿತ್ಸೆ ನೀಡುವುದು ಸುಲಭವಲ್ಲ’ ಎಂದು ಹೆಸರು ಬಹಿರಂಗ ಪಡಿಸಲು ಬಯಸದ ವೈದ್ಯರೊಬ್ಬರು ಹೇಳಿದರು.</p>.<p>ಧಾರವಾಡ ಜಿಲ್ಲೆಯಲ್ಲಿ ಕಿಮ್ಸ್ ಸೇರಿದಂತೆ ಜಿಲ್ಲಾಡಳಿತ ಕೊರೊನಾ ಸೋಂಕಿತರಿಗೆಂದು ಸಿದ್ಧಪಡಿಸಿಕೊಂಡಿದ್ದ ಆಸ್ಪತ್ರೆಗಳ ಹಾಸಿಗೆಗಳೆಲ್ಲ ಭರ್ತಿಯಾಗಿವೆ. ಸಮಾಜ ಕಲ್ಯಾಣ ಇಲಾಖೆ ಆಸ್ಪತ್ರೆ, ಖಾಸಗಿ ವಸತಿ ನಿಲಯಗಳನ್ನು ವಶಕ್ಕೆ ತೆಗೆದುಕೊಂಡು ಅಲ್ಲಿ ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆಯಲಾಗಿದೆ.</p>.<p class="Subhead">ಸರ್ಕಾರಿ ಆಸ್ಪತ್ರೆಗಳಲ್ಲಿ ಜಾಗವಿಲ್ಲದ್ದರಿಂದ ಕೆಲವರನ್ನು ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುತ್ತಿದೆ. ದುಬಾರಿ ವೆಚ್ಚ ಭರಿಸಲಾಗುವುದಿಲ್ಲ ಎಂಬ ಕಾರಣಕ್ಕೆ ಕೆಲವರು ತಪಾಸಣೆಗೂ ಮುಂದಾಗುತ್ತಿಲ್ಲ. ಸೋಂಕು ಹರಡಲು ಇದೂ ಒಂದು ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>‘ಜಿಲ್ಲಾಡಳಿತ ವಿವಿಧೆಡೆ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತಿದೆ. ರೈಲ್ವೆ ಇಲಾಖೆ ಸಿದ್ಧಪಡಿಸಿರುವ ಐಸೋಲೇಷನ್ ಬೋಗಿಗಳಿಗೆ ಬೇಡಿಕೆ ಸಲ್ಲಿಸಿಲ್ಲ. ಪರಿಸ್ಥಿತಿ ನೋಡಿಕೊಂಡು ಬೇಡಿಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕೋವಿಡ್–19 ದೃಢಪಟ್ಟವರಿಗೆ ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಹಾಸಿಗೆ ದೊರೆಯುತ್ತಿಲ್ಲ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಸೋಂಕಿತರಿಗೆ ಚಿಕಿತ್ಸೆಗೆಂದೇ ನೈರುತ್ಯ ರೈಲ್ವೆ ವಲಯ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈಲ್ವೆ ಬೋಗಿಗಳಲ್ಲಿ ಸಿದ್ಧಪಡಿಸಿದ ಹಾಸಿಗೆಗಳನ್ನು ಬಳಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿಲ್ಲ.</p>.<p>ನೈರುತ್ಯ ರೈಲ್ವೆಯು 312 ಬೋಗಿಗಳನ್ನು ಐಸೊಲೇಷನ್ (ಪ್ರತ್ಯೇಕಿಸಲಾದ ವಾರ್ಡ್) ಮತ್ತು ತೀವ್ರ ನಿಗಾ ಘಟಕಗಳನ್ನಾಗಿ (ಐಸಿಯು) ಪರಿವರ್ತಿಸಿದೆ. ಸೋಂಕಿತರು ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿ ಒಟ್ಟು 2,496 ಮಂದಿ ಈ ಬೋಗಿಗಳಲ್ಲಿರಬಹುದಾಗಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೋಗಿಗಳನ್ನು ಕೋವಿಡ್– 19 ರೋಗಿಗಳಿಗೆ ಬೇಕಾದಂತೆ ಸಿದ್ಧಪಡಿಸಲು ಪ್ರತಿ ಬೋಗಿಗೆ ಅಂದಾಜು ₹ 30 ಸಾವಿರ ಖರ್ಚು ಮಾಡಲಾಗಿದೆ. ಏಪ್ರಿಲ್ನಲ್ಲಿಯೇ ಬೋಗಿಗಳು ಸಿದ್ಧವಾಗಿವೆ. ಇದುವರೆಗೆ ರಾಜ್ಯದ ಆರೋಗ್ಯ ಇಲಾಖೆ ಬೋಗಿಗೆ ಬೇಡಿಕೆ ಸಲ್ಲಿಸಿಲ್ಲ. ಸಲ್ಲಿಸಿದರೆ, ನೀಡಲಾಗುವುದು’ ಎಂದರು.</p>.<p>‘ರೈಲ್ವೆ ಬೋಗಿಗಳಲ್ಲಿ ಸ್ಲೀಪರ್ ಸೀಟುಗಳನ್ನೇ ಹಾಸಿಗೆಗಳನ್ನಾಗಿ ಪರಿವರ್ತಿಸಲಾಗಿದೆ. ಅಲ್ಲಿ ಚಿಕಿತ್ಸೆ ನೀಡುವುದು ಕಷ್ಟ. ವೈದ್ಯಕೀಯ ಸಾಮಗ್ರಿಗಳ ಕೊರತೆ ಇದೆ. ಚಿಕಿತ್ಸೆ ನೀಡುವುದು ಸುಲಭವಲ್ಲ’ ಎಂದು ಹೆಸರು ಬಹಿರಂಗ ಪಡಿಸಲು ಬಯಸದ ವೈದ್ಯರೊಬ್ಬರು ಹೇಳಿದರು.</p>.<p>ಧಾರವಾಡ ಜಿಲ್ಲೆಯಲ್ಲಿ ಕಿಮ್ಸ್ ಸೇರಿದಂತೆ ಜಿಲ್ಲಾಡಳಿತ ಕೊರೊನಾ ಸೋಂಕಿತರಿಗೆಂದು ಸಿದ್ಧಪಡಿಸಿಕೊಂಡಿದ್ದ ಆಸ್ಪತ್ರೆಗಳ ಹಾಸಿಗೆಗಳೆಲ್ಲ ಭರ್ತಿಯಾಗಿವೆ. ಸಮಾಜ ಕಲ್ಯಾಣ ಇಲಾಖೆ ಆಸ್ಪತ್ರೆ, ಖಾಸಗಿ ವಸತಿ ನಿಲಯಗಳನ್ನು ವಶಕ್ಕೆ ತೆಗೆದುಕೊಂಡು ಅಲ್ಲಿ ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆಯಲಾಗಿದೆ.</p>.<p class="Subhead">ಸರ್ಕಾರಿ ಆಸ್ಪತ್ರೆಗಳಲ್ಲಿ ಜಾಗವಿಲ್ಲದ್ದರಿಂದ ಕೆಲವರನ್ನು ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುತ್ತಿದೆ. ದುಬಾರಿ ವೆಚ್ಚ ಭರಿಸಲಾಗುವುದಿಲ್ಲ ಎಂಬ ಕಾರಣಕ್ಕೆ ಕೆಲವರು ತಪಾಸಣೆಗೂ ಮುಂದಾಗುತ್ತಿಲ್ಲ. ಸೋಂಕು ಹರಡಲು ಇದೂ ಒಂದು ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>‘ಜಿಲ್ಲಾಡಳಿತ ವಿವಿಧೆಡೆ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತಿದೆ. ರೈಲ್ವೆ ಇಲಾಖೆ ಸಿದ್ಧಪಡಿಸಿರುವ ಐಸೋಲೇಷನ್ ಬೋಗಿಗಳಿಗೆ ಬೇಡಿಕೆ ಸಲ್ಲಿಸಿಲ್ಲ. ಪರಿಸ್ಥಿತಿ ನೋಡಿಕೊಂಡು ಬೇಡಿಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>