<p><strong>ಹುಬ್ಬಳ್ಳಿ:</strong> ನಗರದಾದ್ಯಂತ ಶನಿವಾರ ಸಂಜೆ ಸುಮಾರು 20 ನಿಮಿಷ ಮಳೆ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು.</p>.<p>ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನತೆಗೆ, ಮಳೆ ತುಸು ತಂಪನೆರೆಯಿತು. ಮಾರುಕಟ್ಟೆಗೆ ಬಂದವರು ಏಕಾಏಕಿ ಸುರಿದ ಮಳೆಯಿಂದ ಪರದಾಡಿದರು. ಬೈಕ್ ಸವಾರರು ನೆನೆಯುತ್ತಲೇ ಸಂಚರಿಸಿದ ದೃಶ್ಯ ಕಂಡು ಬಂದಿತು.</p>.<p>ರಸ್ತೆ ಕಾಮಗಾರಿ ನಡೆಯುತ್ತಿರುವ ಅಶೋಕನಗರ, ದೇಶಪಾಂಡೆನಗರ, ದೇವಾಂಗಪೇಟೆ, ಚನ್ನಪೇಟೆ, ಆನಂದನಗರ ರಸ್ತೆಯ ಅಲ್ಲಲ್ಲಿ ನೀರು ನಿಂತಿತ್ತು. ಕಾಮಗಾರಿಯಿಂದಾಗಿ ನಿಂತ ಕೊಳಚೆ ನೀರಿನಿಂದ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಗರದಾದ್ಯಂತ ಶನಿವಾರ ಸಂಜೆ ಸುಮಾರು 20 ನಿಮಿಷ ಮಳೆ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು.</p>.<p>ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನತೆಗೆ, ಮಳೆ ತುಸು ತಂಪನೆರೆಯಿತು. ಮಾರುಕಟ್ಟೆಗೆ ಬಂದವರು ಏಕಾಏಕಿ ಸುರಿದ ಮಳೆಯಿಂದ ಪರದಾಡಿದರು. ಬೈಕ್ ಸವಾರರು ನೆನೆಯುತ್ತಲೇ ಸಂಚರಿಸಿದ ದೃಶ್ಯ ಕಂಡು ಬಂದಿತು.</p>.<p>ರಸ್ತೆ ಕಾಮಗಾರಿ ನಡೆಯುತ್ತಿರುವ ಅಶೋಕನಗರ, ದೇಶಪಾಂಡೆನಗರ, ದೇವಾಂಗಪೇಟೆ, ಚನ್ನಪೇಟೆ, ಆನಂದನಗರ ರಸ್ತೆಯ ಅಲ್ಲಲ್ಲಿ ನೀರು ನಿಂತಿತ್ತು. ಕಾಮಗಾರಿಯಿಂದಾಗಿ ನಿಂತ ಕೊಳಚೆ ನೀರಿನಿಂದ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>