<p><strong>ಹುಬ್ಬಳ್ಳಿ:</strong> ಗಾಣಿಗರ ಸರ್ವಾಂಗೀಣ ಅಭಿವೃದ್ಧಿಗೆ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಅಖಿಲ ಭಾರತ ಗಾಣಿಗ ಸಂಘದ ಗೌರವಾಧ್ಯಕ್ಷ ಡಾ. ಶೇಖರ ಸಜ್ಜನರ ಆಗ್ರಹಿಸಿದ್ದಾರೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆ ಇಂದು, ನಿನ್ನೆಯದಲ್ಲ. 1995ರಿಂದಲೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸುತ್ತ ಬಂದಿದ್ದೇವೆ. ಆಡಳಿತಕ್ಕೆ ಬಂದ ಪ್ರತಿಯೊಂದು ಸರ್ಕಾರಕ್ಕೂ ನಾವು ಮನವಿ ಸಲ್ಲಿಸಿದ್ದೇವೆ. ಈವರೆಗೂ ನಮ್ಮ ಬೇಡಿಕೆ ಈಡೇರಿಲ್ಲ ಎಂದರು.</p>.<p>ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಗಾಣಿಗ ಸಮಾಜದ ಸುಮಾರು 50 ಲಕ್ಷ ಮಂದಿ ಇದ್ದಾರೆ. ಅವರಲ್ಲಿ ಬಹುತೇಕರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಅವರ ಅಭಿವೃದ್ಧಿಗೆ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿ ಮಾಡಿ, ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.</p>.<p>ಪಿ.ಎಂ. ತಟ್ಟಿಮನಿ, ಅಂದಾನಪ್ಪ ಸಜ್ಜನರ, ಬಾಬುಗೌಡ ಬಿರಾದಾರ, ಶಿವಾನಂದ ತಿರುಕಪ್ಪನವರ, ಸೂರ್ಯಕಾಂತ ಇಟ್ನಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಗಾಣಿಗರ ಸರ್ವಾಂಗೀಣ ಅಭಿವೃದ್ಧಿಗೆ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಅಖಿಲ ಭಾರತ ಗಾಣಿಗ ಸಂಘದ ಗೌರವಾಧ್ಯಕ್ಷ ಡಾ. ಶೇಖರ ಸಜ್ಜನರ ಆಗ್ರಹಿಸಿದ್ದಾರೆ.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆ ಇಂದು, ನಿನ್ನೆಯದಲ್ಲ. 1995ರಿಂದಲೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸುತ್ತ ಬಂದಿದ್ದೇವೆ. ಆಡಳಿತಕ್ಕೆ ಬಂದ ಪ್ರತಿಯೊಂದು ಸರ್ಕಾರಕ್ಕೂ ನಾವು ಮನವಿ ಸಲ್ಲಿಸಿದ್ದೇವೆ. ಈವರೆಗೂ ನಮ್ಮ ಬೇಡಿಕೆ ಈಡೇರಿಲ್ಲ ಎಂದರು.</p>.<p>ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಗಾಣಿಗ ಸಮಾಜದ ಸುಮಾರು 50 ಲಕ್ಷ ಮಂದಿ ಇದ್ದಾರೆ. ಅವರಲ್ಲಿ ಬಹುತೇಕರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಅವರ ಅಭಿವೃದ್ಧಿಗೆ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿ ಮಾಡಿ, ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.</p>.<p>ಪಿ.ಎಂ. ತಟ್ಟಿಮನಿ, ಅಂದಾನಪ್ಪ ಸಜ್ಜನರ, ಬಾಬುಗೌಡ ಬಿರಾದಾರ, ಶಿವಾನಂದ ತಿರುಕಪ್ಪನವರ, ಸೂರ್ಯಕಾಂತ ಇಟ್ನಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>