ಹುಬ್ಬಳ್ಳಿ: ನಗರದಲ್ಲಿ ನಡೆದ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಮೊಹಮ್ಮದ್ ಆರೀಫ್ ಎಂಬಾತನನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಆರೋಪಿ ಆರೀಫ್ ಎಐಎಂಐಎ ಪಕ್ಷದ ಸ್ಥಳೀಯ ಮುಖಂಡ ಎನ್ನಲಾಗಿದೆ. ಹಳೇ ಹುಬ್ಬಳ್ಳಿ ಠಾಣೆ ಎದುರು ಪೊಲೀಸ್ ವಾಹನ ಹತ್ತಿ ಉದ್ರಿಕ್ತರಿಗೆ ಪ್ರಚೋದನೆ ನೀಡಿದ ಆರೋಪ ಈತನ ಮೇಲಿದ್ದು, ಘಟನೆ ನಡೆದ ದಿನದಿಂದ ತಲೆಮರೆಸಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.