ಹುಬ್ಬಳ್ಳಿ: ನಗರದಲ್ಲಿ ಗಲಭೆಗೆ ಕಾರಣವಾಗಿದ್ದ ಆಕ್ಷೇಪಾರ್ಹ ವಾಟ್ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದ ಆರೋಪಿ ಅಭಿಷೇಕ ಹಿರೇಮಠ ಶುಕ್ರವಾರ ಪೊಲೀಸ್ ಭದ್ರತೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು, ವಾಪಸ್ ಜೈಲಿಗೆ ಮರಳಿದ್ದಾನೆ.
ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಯಾಗಿರುವ ಅಭಿಷೇಕ, ಇಂದು ವ್ಯವಹಾರ ಅಧ್ಯಯನ (ಬಿಸಿನೆಸ್ ಸ್ಟಡಿ) ವಿಷಯದ ಪರೀಕ್ಷೆ ಬರೆದಿದ್ದಾನೆ. ಮಧ್ಯಾಹ್ನ 1.30ರ ಹೊತ್ತಿಗೆ ಪರೀಕ್ಷೆ ಮುಗಿಸಿ ಹೊರಬಂದ ಆತನನ್ನು ಪೊಲೀಸ್ ಭದ್ರತೆಯಲ್ಲಿ ಇಲ್ಲಿನ ಉಪ ಕಾರಾಗೃಹಕ್ಕೆ ಕರೆತರಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.