<p><strong>ಹುಬ್ಬಳ್ಳಿ</strong>: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ತನ್ನೆರಡು ಕಾಲುಗಳನ್ನು ಕಳೆದುಕೊಂಡಿರುವ ಘಟನೆ ನಗರದ ಕಿಮ್ಸ್ ಹಿಂಭಾಗದಲ್ಲಿರುವ ರೈಲ್ವೆ ಹಳಿ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯ ಯುವಕರು ತಂಡಾದ ಕಾಲುಗಳ ಸಮೇತ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಇಲ್ಲಿನ ರೈಲ್ವೆ ನಿಲ್ದಾಣದಿಂದ ಹೊರಟ ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ವ್ಯಕ್ತಿ ಸಿಲುಕಿದ್ದಾನೆ. ಹಳಿ ಮೇಲೆ ಆತ ಇರುವುದನ್ನು ದೂರದಲ್ಲೇ ಗಮನಿಸಿದ ಲೋಕೊಪೈಲಟ್ ಹಾರ್ನ್ ಮಾಡಿದರೂ ವ್ಯಕ್ತಿ ಪಕ್ಕಕ್ಕೆ ಸರಿದಿಲ್ಲ. ನಂತರ ಅವರು ರೈಲನ್ನು ನಿಲುಗಡೆ ಮಾಡಿದರೂ, ವ್ಯಕ್ತಿಯ ಕಾಲುಗಳ ಮೇಲೆ ಎಂಜಿನ್ ಸೇರಿದಂತೆ ಎರಡ್ಮೂರು ಬೋಗಿಗಳ ಗಾಲಿಗಳು ಹತ್ತಿವೆ. ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದರು.</p>.<p>ಹೆಗ್ಗೇರಿಯವರಾದ ವ್ಯಕ್ತಿ ತನ್ನ ಕೈ ಮೇಲೆ ಬರೆದುಕೊಂಡಿದ್ದ ಪತ್ನಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಷಯಗಳ ತಿಳಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ಹೇಳಿದರು.</p>.<p><a href="https://www.prajavani.net/karnataka-news/siddaramaiah-reminds-hublot-watch-case-for-counter-to-hd-kumaraswamy-934248.html" itemprop="url">ವಾಚ್ ಪ್ರಕರಣವೇನು ₹300 ಕೋಟಿ ಅವ್ಯವಹಾರವೇ?: ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ತನ್ನೆರಡು ಕಾಲುಗಳನ್ನು ಕಳೆದುಕೊಂಡಿರುವ ಘಟನೆ ನಗರದ ಕಿಮ್ಸ್ ಹಿಂಭಾಗದಲ್ಲಿರುವ ರೈಲ್ವೆ ಹಳಿ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯ ಯುವಕರು ತಂಡಾದ ಕಾಲುಗಳ ಸಮೇತ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಇಲ್ಲಿನ ರೈಲ್ವೆ ನಿಲ್ದಾಣದಿಂದ ಹೊರಟ ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ವ್ಯಕ್ತಿ ಸಿಲುಕಿದ್ದಾನೆ. ಹಳಿ ಮೇಲೆ ಆತ ಇರುವುದನ್ನು ದೂರದಲ್ಲೇ ಗಮನಿಸಿದ ಲೋಕೊಪೈಲಟ್ ಹಾರ್ನ್ ಮಾಡಿದರೂ ವ್ಯಕ್ತಿ ಪಕ್ಕಕ್ಕೆ ಸರಿದಿಲ್ಲ. ನಂತರ ಅವರು ರೈಲನ್ನು ನಿಲುಗಡೆ ಮಾಡಿದರೂ, ವ್ಯಕ್ತಿಯ ಕಾಲುಗಳ ಮೇಲೆ ಎಂಜಿನ್ ಸೇರಿದಂತೆ ಎರಡ್ಮೂರು ಬೋಗಿಗಳ ಗಾಲಿಗಳು ಹತ್ತಿವೆ. ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದರು.</p>.<p>ಹೆಗ್ಗೇರಿಯವರಾದ ವ್ಯಕ್ತಿ ತನ್ನ ಕೈ ಮೇಲೆ ಬರೆದುಕೊಂಡಿದ್ದ ಪತ್ನಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಷಯಗಳ ತಿಳಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ ಎಂದು ಹೇಳಿದರು.</p>.<p><a href="https://www.prajavani.net/karnataka-news/siddaramaiah-reminds-hublot-watch-case-for-counter-to-hd-kumaraswamy-934248.html" itemprop="url">ವಾಚ್ ಪ್ರಕರಣವೇನು ₹300 ಕೋಟಿ ಅವ್ಯವಹಾರವೇ?: ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>