ಹೊಸೂರಿನ ಹೊಸ ಕೋರ್ಟ್ ಹಿಂಭಾಗದ ನಗರದ ತಿಮ್ಮಸಾಗರ ಬಡಾವಣೆಯಲ್ಲಿ ಅರ್ಬನ್ ರೂಟ್ಸ್ ಹೆಸರಿನಲ್ಲಿ ಕೇಶ್ವಾಪುರದ ಜಯಶೀಲ ಬಾಲ್ಮಿ ಮತ್ತು ನರೇಂದ್ರ ತಿಕಂದರ ಅವರು ಅನಧಿಕೃತವಾಗಿ ಬಾರ್ ನಡೆಸುತ್ತಿದ್ದರು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು, 15 ಹುಕ್ಕಾ ಪೈಪ್, 20 ಹುಕ್ಕಾ ಸ್ಟ್ಯಾಂಡ್, ತಂಬಾಕು ವಸ್ತು ಹಾಕಲು ಬಳಸಲಾಗುವ ವಿಸಲಾ ಪೇಪರ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ.