<p><strong>ಧಾರವಾಡ</strong>: ‘ಹಾಸ್ಯ ಕಾರ್ಯಕ್ರಮಗಳಲ್ಲಿ ಜನರು ಪಾಲ್ಗೊಳ್ಳುತ್ತಾರೆ. ಹಾಸ್ಯಕ್ಕೆ ಜನರ ಮನ ರಂಜಿಸುವ, ಒಗ್ಗೂಡಿಸುವ ಶಕ್ತಿ ಇದೆ’ ಎಂದು ಹಿಂದುಸ್ತಾನಿ ಸಂಗೀತಗಾರ ಮೃತ್ಯುಂಜಯ ಶೆಟ್ಟರ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರೊ.ಎಂ.ಎಸ್. ಸುಂಕಾಪುರ ದತ್ತಿ ಅಂಗವಾಗಿ ಈಚೆಗೆ ಆಯೋಜಿಸಿದ್ದ ‘ನಗೆಯ ಬಣ್ಣ ಹುಡುಕಿದ ಮಾನವತಾವಾದಿ ಎಂ.ಎಸ್.ಸುಂಕಾಪುರ’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಎಂ. ಎಸ್. ಸುಂಕಾಪುರ ನೆಲಮೂಲ ಸಂಸ್ಕೃತಿಯನ್ನು ಪೋಷಿಸಿ ಬೆಳೆಸಿದವರು, ಹಾಸ್ಯ ಪ್ರಜ್ಞೆಯ ಮೂಲಕ ಜನರ ಮನಸ್ಸನ್ನು ಒಂದುಗೂಡಿಸಿದವರು’ ಎಂದರು.</p>.<p>ಪುಣೆಯ ಶಶಿಕಾಂತ ಮಾತನಾಡಿ, ‘ಎಂ.ಎಸ್.ಸುಂಕಾಪುರ ಅವರು ಕನ್ನಡದ ಬೇರನ್ನು ಜಾನಪದ ಸಂಸ್ಕತಿಯಲ್ಲಿ ಕಂಡವರು. ಅವರ ಸಹಜ ಮಾತುಗಳಲ್ಲಿಯೂ ಹಾಸ್ಯ ಪ್ರಜ್ಞೆ ಇರುತ್ತಿತ್ತು’ ಎಂದು ತಿಳಿಸಿದರು.</p>.<p>‘ಕರ್ನಾಟಕ ವಿ.ವಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿದ್ದರು. ಕನ್ನಡ ಸಾಹಿತ್ಯದಲ್ಲಿ ಹಾಸ್ಯ ಮಹಾಪ್ರಬಂಧ ರಚಿಸಿ ಪಿಎಚ್.ಡಿ. ಪಡೆದರು. ಒಟ್ಟು 60 ಕೃತಿಗಳು ರಚಿಸಿದ್ದಾರೆ’ ಎಂದರು.</p>.<p>ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವೆ ಲೀಲಾವತಿ ಆರ್.ಪ್ರಸಾದ್, ಶಂಕರ ಕುಂಬಿ, ಜಿನದತ್ತ ಹಡಗಲಿ, ಶಿವಾನಂದ ಭಾವಿಕಟ್ಟಿ, ವೀರಣ್ಣ ಒಡ್ಡೀನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಹಾಸ್ಯ ಕಾರ್ಯಕ್ರಮಗಳಲ್ಲಿ ಜನರು ಪಾಲ್ಗೊಳ್ಳುತ್ತಾರೆ. ಹಾಸ್ಯಕ್ಕೆ ಜನರ ಮನ ರಂಜಿಸುವ, ಒಗ್ಗೂಡಿಸುವ ಶಕ್ತಿ ಇದೆ’ ಎಂದು ಹಿಂದುಸ್ತಾನಿ ಸಂಗೀತಗಾರ ಮೃತ್ಯುಂಜಯ ಶೆಟ್ಟರ ಹೇಳಿದರು.</p>.<p>ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರೊ.ಎಂ.ಎಸ್. ಸುಂಕಾಪುರ ದತ್ತಿ ಅಂಗವಾಗಿ ಈಚೆಗೆ ಆಯೋಜಿಸಿದ್ದ ‘ನಗೆಯ ಬಣ್ಣ ಹುಡುಕಿದ ಮಾನವತಾವಾದಿ ಎಂ.ಎಸ್.ಸುಂಕಾಪುರ’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಎಂ. ಎಸ್. ಸುಂಕಾಪುರ ನೆಲಮೂಲ ಸಂಸ್ಕೃತಿಯನ್ನು ಪೋಷಿಸಿ ಬೆಳೆಸಿದವರು, ಹಾಸ್ಯ ಪ್ರಜ್ಞೆಯ ಮೂಲಕ ಜನರ ಮನಸ್ಸನ್ನು ಒಂದುಗೂಡಿಸಿದವರು’ ಎಂದರು.</p>.<p>ಪುಣೆಯ ಶಶಿಕಾಂತ ಮಾತನಾಡಿ, ‘ಎಂ.ಎಸ್.ಸುಂಕಾಪುರ ಅವರು ಕನ್ನಡದ ಬೇರನ್ನು ಜಾನಪದ ಸಂಸ್ಕತಿಯಲ್ಲಿ ಕಂಡವರು. ಅವರ ಸಹಜ ಮಾತುಗಳಲ್ಲಿಯೂ ಹಾಸ್ಯ ಪ್ರಜ್ಞೆ ಇರುತ್ತಿತ್ತು’ ಎಂದು ತಿಳಿಸಿದರು.</p>.<p>‘ಕರ್ನಾಟಕ ವಿ.ವಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿದ್ದರು. ಕನ್ನಡ ಸಾಹಿತ್ಯದಲ್ಲಿ ಹಾಸ್ಯ ಮಹಾಪ್ರಬಂಧ ರಚಿಸಿ ಪಿಎಚ್.ಡಿ. ಪಡೆದರು. ಒಟ್ಟು 60 ಕೃತಿಗಳು ರಚಿಸಿದ್ದಾರೆ’ ಎಂದರು.</p>.<p>ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವೆ ಲೀಲಾವತಿ ಆರ್.ಪ್ರಸಾದ್, ಶಂಕರ ಕುಂಬಿ, ಜಿನದತ್ತ ಹಡಗಲಿ, ಶಿವಾನಂದ ಭಾವಿಕಟ್ಟಿ, ವೀರಣ್ಣ ಒಡ್ಡೀನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>