‘ಪತಿ ತೀರಿಕೊಂಡ ಸಂದರ್ಭದಲ್ಲಿ ಜನಪ್ರತಿನಿಧಿಗಳಾದಿಯಾಗಿ ಎಲ್ಲರೂ ಬಂದು ಸಾಂತ್ವನ ಹೇಳಿ, ಪರಿಹಾರ ಕೊಡಿಸುವ ಭರವಸೆ ನೀಡಿದರು. ಆದರೆ, ಇಂದಿಗೂ ಬಿಡಿಗಾಸು ಸಿಕ್ಕಿಲ್ಲ. ಅಂಗವಿಕಲ ಮಗನನ್ನು ಕಟ್ಟಿಕೊಂಡು ರಾಜಕೀಯ ನಾಯಕರನ್ನು ಭೇಟಿ ಮಾಡಿ ಮನವಿ ಕೊಟ್ಟರೂ, ಕಚೇರಿಗಳಿಗೆ ಅಲೆದರೂ ಪ್ರಯೋಜನವಾಗಿಲ್ಲ’ ಎಂದು ಹೇಮಾಬಾಯಿ ಮೆಹರವಾಡೆ ‘ಪ್ರಜಾವಾಣಿ’ಯೊಂದಿಗೆ ಅಳಲು ತೋಡಿಕೊಂಡರು.