ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗಾಗಿ ಶಿವರಾಮ ಹೆಬ್ಬಾರ ಅವರು ತಮ್ಮ ಶಾಸಕ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಅವರಿಗಾಗಿ ಪಕ್ಷದ ನಿರ್ದೇಶನದ ಮೇರೆಗೆ, ನಾನು ಕಣದಿಂದ ಹಿಂದೆ ಸರಿದ್ದೇನೆ. ಒಂದು ವೇಳೆ ಅವರು ಸ್ಪರ್ಧಿಸದಿದ್ದರೆ, ನಂತರ ನಾನು ಕಣಕ್ಕಿಳಿಯಲಿದ್ದೇನೆ’ ಎಂದರು.