‘ದೆಹಲಿಗೆ ಹೋದಾಗ ಪಕ್ಷ ಹಾಗೂ ಆರ್ಎಸ್ಎಸ್ ಮುಖಂಡರನ್ನು ಭೇಟಿಯಾಗುವುದು ಸಹಜ. ಇದೀಗ ಸಚಿವ ಜೋಶಿ ಅವರನ್ನು ಭೇಟಿಯಾಗಲು ಬಂದಿದ್ದೇನೆ. ಇದರಲ್ಲಿ ಯಾವುದೇ ವಿಶೇಷವಿಲ್ಲ’ ಎಂದ ಪರಣ್ಣ, ‘ಕೊಪ್ಪಳ ಜಿಲ್ಲೆಯಲ್ಲಿ 11 ಸರ್ಕಾರಿ ಕಟ್ಟಡಗಳನ್ನು ನೂತನವಾಗಿ ನಿರ್ಮಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಡಿ. 15ರಂದು ಅಲ್ಲಿಗೆ ಬಂದು, ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ’ ಎಂದು ಹೇಳಿದರು.