<p><strong>ಹುಬ್ಬಳ್ಳಿ: </strong>ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಹೇಗೆ ಸಂಪುಟ ಸೇರಲಿ. ನನಗೂ ಸ್ವಾಭಿಮಾನ ಮತ್ತು ನೈತಿಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ ಶೆಟ್ಟರ್ ಹೇಳಿದರು.</p>.<p>ಹುಬ್ಬಳ್ಳಿಯಲ್ಲಿರುವ ಆರೆಸ್ಸೆಸ್ ಕಚೇರಿಯಲ್ಲಿ ಗುರುವಾರ ಸಂಘ ಪರಿವಾರದ ಮುಖಂಡರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಮುಂದುವರೆಯಲು ಸಾಧ್ಯವಿಲ್ಲ. ಸದ್ಯ ನಾನು ಶಾಸಕನಿದ್ದೇನೆ. ಮಂತ್ರಿ ಇಲ್ಲದಿದ್ದರೂ ಅಭಿವೃದ್ಧಿ ಮಾಡಬಹುದು. ಅಭಿವೃದ್ಧಿ ಮಾಡಿ ತೋರಿಸುತ್ತೇನೆ. ಪ್ರಹ್ಲಾದ ಜೋಶಿ ಕೇಂದ್ರ ಸಚಿವರು ಈ ಭಾಗದವರೇ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಧಾರವಾಡ ಜಿಲ್ಲೆಯವರೇ ಎಂದರು.</p>.<p>ಶೆಟ್ಟರ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡುವುದಾಗಿ ಬೆಳಿಗ್ಗೆ ಹೇಳಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಕಡೆ ಕ್ಷಣದಲ್ಲಿ ಭೇಟಿ ರದ್ದುಗೊಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/i-will-not-join-cabinet-of-basavaraj-bommai-says-jagadish-shettar-852617.html" target="_blank">ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಲಾರೆ: ಜಗದೀಶ ಶೆಟ್ಟರ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಹೇಗೆ ಸಂಪುಟ ಸೇರಲಿ. ನನಗೂ ಸ್ವಾಭಿಮಾನ ಮತ್ತು ನೈತಿಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ ಶೆಟ್ಟರ್ ಹೇಳಿದರು.</p>.<p>ಹುಬ್ಬಳ್ಳಿಯಲ್ಲಿರುವ ಆರೆಸ್ಸೆಸ್ ಕಚೇರಿಯಲ್ಲಿ ಗುರುವಾರ ಸಂಘ ಪರಿವಾರದ ಮುಖಂಡರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಮುಂದುವರೆಯಲು ಸಾಧ್ಯವಿಲ್ಲ. ಸದ್ಯ ನಾನು ಶಾಸಕನಿದ್ದೇನೆ. ಮಂತ್ರಿ ಇಲ್ಲದಿದ್ದರೂ ಅಭಿವೃದ್ಧಿ ಮಾಡಬಹುದು. ಅಭಿವೃದ್ಧಿ ಮಾಡಿ ತೋರಿಸುತ್ತೇನೆ. ಪ್ರಹ್ಲಾದ ಜೋಶಿ ಕೇಂದ್ರ ಸಚಿವರು ಈ ಭಾಗದವರೇ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಧಾರವಾಡ ಜಿಲ್ಲೆಯವರೇ ಎಂದರು.</p>.<p>ಶೆಟ್ಟರ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡುವುದಾಗಿ ಬೆಳಿಗ್ಗೆ ಹೇಳಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಕಡೆ ಕ್ಷಣದಲ್ಲಿ ಭೇಟಿ ರದ್ದುಗೊಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/i-will-not-join-cabinet-of-basavaraj-bommai-says-jagadish-shettar-852617.html" target="_blank">ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಲಾರೆ: ಜಗದೀಶ ಶೆಟ್ಟರ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>