‘ನನ್ನ ಸ್ಪರ್ಧೆ ವಿರುದ್ಧ ಯಾರೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಹಾವೇರಿ, ಬ್ಯಾಡಗಿ, ಹಾನಗಲ್ ಕಡೆಗಳಲ್ಲಿ ಸಮಾವೇಶ ನಡೆಸಿ, ಗ್ರಾಮ ಪಂಚಾಯ್ತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ಹಾವೇರಿಯಲ್ಲಿ ಬಂಡಾಯ ಅಭ್ಯರ್ಥಿ ಸ್ಪರ್ಧಿಸಿದ್ದರೂ ನನ್ನ ಗೆಲುವಿನ ಮೇಲೆ ಯಾವುದೇ ಪರಿಣಾಮ ಬೀರದು. ಎರಡು ಅವಧಿಗೆ ಮತ ನೀಡಿದ ಮತದಾರರು ಮೂರನೇ ಬಾರಿಯೂ ನನ್ನ ಕೈ ಹಿಡಿಯಲಿದ್ದಾರೆ’ ಎಂದು ಹೇಳಿದರು.