‘ಸಿದ್ದರಾಮಯ್ಯ ನನಗೆ ಕರೆ ಮಾಡಿದ್ದರು, ಮಹದೇವಪ್ಪ ಮನೆಗೆ ಬಂದಿದ್ದರು ಎಂದು ಶಾಸಕ ಜಮೀರ್ ಅಹ್ಮದ್ ಹೇಳುತ್ತಾರೆ. ಪಕ್ಷಕ್ಕೆ ನಾವೇನು ಅಲ್ಲ ಅಂದಮೇಲೆ ನಮ್ಮ ಪಾಡಿಗೆ ಬಿಟ್ಟುಬಿಡಬೇಕು. ಬೇಡ ಜಂಗಮರ ರೀತಿ ಹೊರೆಟು ಬಿಡುತ್ತೇವೆ. ಸದ್ಯ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಮತಾಂತರ ಮಸೂದೆ ಪರಿಷತ್ನಲ್ಲಿ ಮಂಡನೆಯಾಗಲಿದೆ. ಈ ವೇಳೆ ರಾಜೀನಾಮೆ ನೀಡಿದರೆ ಬಿಜೆಪಿಯಿಂದ ಹಣ ಪಡೆದಿದ್ದಾರೆ ಎಂಬ ಆರೋಪ ಬರುತ್ತದೆ. ಅದರಿಂದ ಬಿಜೆಪಿಗೆ ಲಾಭ ಆಗುತ್ತದೆ. ಹೀಗಾಗಿ ಬಜೆಟ್ ಅಧಿವೇಶನದ ನಂತರ ರಾಜೀನಾಮೆ ಕುರಿತು ತೀರ್ಮಾನ ಮಾಡುತ್ತೇನೆ’ ಎಂದು ಹೇಳಿದರು.