‘ಕ್ಷೇತ್ರದಲ್ಲಿ ಅನೇಕ ಮೇಳ, ಸಮಾವೇಶಗಳನ್ನು ಸಂಘಟಿಸಿ ಸಾಮಾಜಿಕ ಜೀವನದಲ್ಲಿ ಸಕ್ರಿಯನಾಗಿದ್ದೇನೆ. ಆದ್ದರಿಂದ ಟಿಕೆಟ್ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ಎಚ್. ವಿಶ್ವನಾಥ, ಬಸವರಾಜ ಹೊರಟ್ಟಿ, ವೈ.ಎಸ್.ವಿ. ದತ್ತಾ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ಸೇರಿದಂತೆ ಹಲವು ಮುಖಂಡರಲ್ಲಿ ಕೇಳಿಕೊಂಡಿದ್ದೇನೆ. ಇನ್ನೆರೆಡು ದಿನಗಳಲ್ಲಿ ಎರಡು ನಾಮಪತ್ರ ಸಲ್ಲಿಸುತ್ತೇನೆ’ ಎಂದರು.