‘ಕೇಂದ್ರ ಸರ್ಕಾರದಿಂದಲೂ ಮೀಸಲಾತಿ ಕಲ್ಪಿಸಲು ಆದಿಬಣಜಿಗ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು, ಸಮಾಜದ ವತಿಯಿಂದ ಕಲಬುರ್ಗಿ, ವಿಜಯಪುರ, ಚಿಕ್ಕೋಡಿ, ಸವದತ್ತಿ, ಹುಬ್ಬಳ್ಳಿ, ಧಾರವಾಡದಲ್ಲಿ ಶಿಕ್ಷಣ ಸಂಸ್ಥೆ ಮತ್ತು ವಿದ್ಯಾರ್ಥಿ ನಿಲಯ ಸ್ಥಾಪಿಸಲು ಉಚಿತ ನಿವೇಶನ ಮತ್ತು ಧನ ಸಹಾಯ ಕೊಡಬೇಕು, ವೀರಶೈವ ಧರ್ಮ ಸಂಸ್ಥಾಪಕರಾದ ಜಗದ್ಗುರು ಆದಿ ರೇಣುಕಾಚಾರ್ಯರ ಜಯಂತಿಯನ್ನು ಪ್ರತಿ ವರ್ಷ ಸರ್ಕಾರದ ವತಿಯಿಂದಲೇ ಆಚರಿಸಬೇಕು. ರಾಜ್ಯದ ಯಾವುದಾದರೂ ವಿಶ್ವವಿದ್ಯಾಲಯಕ್ಕೆ ಆದಿ ರೇಣುಕಾಚಾರ್ಯರ ಹೆಸರು ನಾಮಕರಣ ಮಾಡಬೇಕು’ ಎಂದು ಆಗ್ರಹಿಸಿದರು.