<p><strong>ಹುಬ್ಬಳ್ಳಿ</strong>: ನನ್ನ ತಾಯಿಯ ₹1,500 ಪಿಂಚಣಿ ಹಣದಲ್ಲಿ ಕಷ್ಟಪಟ್ಟು ಓದಿ ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದೇನೆ. ಸರ್ಕಾರ ಮುರುಪರೀಕ್ಷೆ ನಿರ್ಧಾರ ಮಾಡಿ ಬದುಕಿನ ಖುಷಿಯನ್ನೇ ಕೊಂದು ಹಾಕಿತು ಎಂದು 94ನೇ ರ್ಯಾಂಕ್ ಪಡೆದ ಚಿಕ್ಕೋಡಿಯ ಸಂತೋಷ್ ಕಾಂಬ್ಳೆ ಸೇನಾಪತಿ ನೋವು ತೋಡಿಕೊಂಡರು.</p>.<p>‘ಹುದ್ದೆಗೆ ಆಯ್ಕೆ ಮಾಡುವಂತೆ ನಾನು ಯಾರಿಗಾದರೂ ಹಣ ಕೊಟ್ಟಿದ್ದರೆ ಅದನ್ನು ವಾಪಸ್ ಕೊಡಲಿ; ಅದೇ ಹಣದಿಂದ ಊರಿನಲ್ಲಿಯೇ ಗ್ಯಾರೇಜ್ ಆರಂಭಿಸುತ್ತೇನೆ. ನಮ್ಮ ಕುಟುಂಬದ ಎಲ್ಲಾ ಆಸ್ತಿ ಮಾರಿದರೂ ₹3 ಲಕ್ಷ ಹಣ ಬರುವುದಿಲ್ಲ’ ಎಂದು ಮೆಕಾನಿಕಲ್ ಎಂಜಿನಿಯರ್ ಓದಿರುವ ಸಂತೋಷ್ ಹೇಳಿದರು.</p>.<p>‘ನಾನೂ ವಿಚಾರಣೆಗೆ ಒಳಗಾಗಿದ್ದೇನೆ. ಸರ್ಕಾರದಿಂದ ನ್ಯಾಯ ಸಿಗುವ ಭರವಸೆಯಿತ್ತು. ಆಯ್ಕೆಯಾದ ಅಭ್ಯರ್ಥಿಗಳ ವಿಚಾರಣೆ ಮಾಡಿ ಈಗ ಮರುಪರೀಕ್ಷೆ ಘೋಷಿಸಿರುವ ಸರ್ಕಾರ ದೊಂಬರಾಟ ಆಡುತ್ತಿದೆಯೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇದನ್ನೂ ಒದಿ.. <a href="https://www.prajavani.net/district/dharwad/psi-exam-selected-candidates-urges-reconsider-the-decission-to-reexam-932573.html"><strong>ಪಿಎಸ್ಐ ಪರೀಕ್ಷೆ ರದ್ದು: ಒಂದು ತೊಟ್ಟು ವಿಷ ಕೊಟ್ಟುಬಿಡಿ– ಆಯ್ಕೆಯಾದವರ ಆಕ್ರೋಶ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ನನ್ನ ತಾಯಿಯ ₹1,500 ಪಿಂಚಣಿ ಹಣದಲ್ಲಿ ಕಷ್ಟಪಟ್ಟು ಓದಿ ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದೇನೆ. ಸರ್ಕಾರ ಮುರುಪರೀಕ್ಷೆ ನಿರ್ಧಾರ ಮಾಡಿ ಬದುಕಿನ ಖುಷಿಯನ್ನೇ ಕೊಂದು ಹಾಕಿತು ಎಂದು 94ನೇ ರ್ಯಾಂಕ್ ಪಡೆದ ಚಿಕ್ಕೋಡಿಯ ಸಂತೋಷ್ ಕಾಂಬ್ಳೆ ಸೇನಾಪತಿ ನೋವು ತೋಡಿಕೊಂಡರು.</p>.<p>‘ಹುದ್ದೆಗೆ ಆಯ್ಕೆ ಮಾಡುವಂತೆ ನಾನು ಯಾರಿಗಾದರೂ ಹಣ ಕೊಟ್ಟಿದ್ದರೆ ಅದನ್ನು ವಾಪಸ್ ಕೊಡಲಿ; ಅದೇ ಹಣದಿಂದ ಊರಿನಲ್ಲಿಯೇ ಗ್ಯಾರೇಜ್ ಆರಂಭಿಸುತ್ತೇನೆ. ನಮ್ಮ ಕುಟುಂಬದ ಎಲ್ಲಾ ಆಸ್ತಿ ಮಾರಿದರೂ ₹3 ಲಕ್ಷ ಹಣ ಬರುವುದಿಲ್ಲ’ ಎಂದು ಮೆಕಾನಿಕಲ್ ಎಂಜಿನಿಯರ್ ಓದಿರುವ ಸಂತೋಷ್ ಹೇಳಿದರು.</p>.<p>‘ನಾನೂ ವಿಚಾರಣೆಗೆ ಒಳಗಾಗಿದ್ದೇನೆ. ಸರ್ಕಾರದಿಂದ ನ್ಯಾಯ ಸಿಗುವ ಭರವಸೆಯಿತ್ತು. ಆಯ್ಕೆಯಾದ ಅಭ್ಯರ್ಥಿಗಳ ವಿಚಾರಣೆ ಮಾಡಿ ಈಗ ಮರುಪರೀಕ್ಷೆ ಘೋಷಿಸಿರುವ ಸರ್ಕಾರ ದೊಂಬರಾಟ ಆಡುತ್ತಿದೆಯೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇದನ್ನೂ ಒದಿ.. <a href="https://www.prajavani.net/district/dharwad/psi-exam-selected-candidates-urges-reconsider-the-decission-to-reexam-932573.html"><strong>ಪಿಎಸ್ಐ ಪರೀಕ್ಷೆ ರದ್ದು: ಒಂದು ತೊಟ್ಟು ವಿಷ ಕೊಟ್ಟುಬಿಡಿ– ಆಯ್ಕೆಯಾದವರ ಆಕ್ರೋಶ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>