<p><strong>ಧಾರವಾಡ:</strong> ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಅಂದಾನಗೌಡ ಎಸ್. ಪಾಟೀಲಗೆ ನಾಲ್ಕು ವರ್ಷ ಜೈಲು, ₹ 1 ಲಕ್ಷ ದಂಡವನ್ನು ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್– ವಿಶೇಷ ಕೋರ್ಟ್ ವಿಧಿಸಿದೆ. ₹ 51.72 ಲಕ್ಷ ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ಆದೇಶಿಸಿದೆ. </p><p>ನ್ಯಾಯಾಧೀಶರಾದ ಜರೀನಾ ಅವರು ಈ ಆದೇಶ ನೀಡಿದ್ಧಾರೆ. ಅಂದಾನಗೌಡ ಎಸ್. ಪಾಟೀಲ ಅವರು ಹುಬ್ಬಳ್ಳಿಯ ನಿವಾಸಿ. ಅಂದಾನಗೌಡ ಅವರು ಸೇವಾ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚುವರಿಯಾಗಿ ₹ 3.52 ಕೋಟಿ ಸುಮಾರು ಶೇ 151.13 ರಷ್ಟು ಅಕ್ರಮ ಸಂಪಾದನೆ ಮಾಡಿದ್ದು ಕಂಡುಬಂದಿದೆ.</p><p>ಏನಿದು ಪ್ರಕರಣ: ಸೇವಾ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ಧಾರೆ ಎಂದು </p><p>ಅಂದಾನಗೌಡ ಪಾಟೀಲ ವಿರುದ್ಧ ಅವರ 2014 ಆಗಸ್ಟ್ 6ರಂದು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಎಸ್ಪಿ ಕೆ.ಪರಶುರಾಮ, ಇನ್ಸ್ಪೆಕ್ಟರ್ ಶಂಕರಗೌಡ ಎಸ್ ಬಸನಗೌಡ್ರ, ಆರಕ್ಷಕ ನಿರೀಕ್ಷಕರು ಪ್ರಕರಣ ನಡೆಸಿ ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಅಂದಾನಗೌಡ ಎಸ್. ಪಾಟೀಲಗೆ ನಾಲ್ಕು ವರ್ಷ ಜೈಲು, ₹ 1 ಲಕ್ಷ ದಂಡವನ್ನು ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್– ವಿಶೇಷ ಕೋರ್ಟ್ ವಿಧಿಸಿದೆ. ₹ 51.72 ಲಕ್ಷ ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ಆದೇಶಿಸಿದೆ. </p><p>ನ್ಯಾಯಾಧೀಶರಾದ ಜರೀನಾ ಅವರು ಈ ಆದೇಶ ನೀಡಿದ್ಧಾರೆ. ಅಂದಾನಗೌಡ ಎಸ್. ಪಾಟೀಲ ಅವರು ಹುಬ್ಬಳ್ಳಿಯ ನಿವಾಸಿ. ಅಂದಾನಗೌಡ ಅವರು ಸೇವಾ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚುವರಿಯಾಗಿ ₹ 3.52 ಕೋಟಿ ಸುಮಾರು ಶೇ 151.13 ರಷ್ಟು ಅಕ್ರಮ ಸಂಪಾದನೆ ಮಾಡಿದ್ದು ಕಂಡುಬಂದಿದೆ.</p><p>ಏನಿದು ಪ್ರಕರಣ: ಸೇವಾ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ಧಾರೆ ಎಂದು </p><p>ಅಂದಾನಗೌಡ ಪಾಟೀಲ ವಿರುದ್ಧ ಅವರ 2014 ಆಗಸ್ಟ್ 6ರಂದು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಎಸ್ಪಿ ಕೆ.ಪರಶುರಾಮ, ಇನ್ಸ್ಪೆಕ್ಟರ್ ಶಂಕರಗೌಡ ಎಸ್ ಬಸನಗೌಡ್ರ, ಆರಕ್ಷಕ ನಿರೀಕ್ಷಕರು ಪ್ರಕರಣ ನಡೆಸಿ ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>