<p><strong>ಹುಬ್ಬಳ್ಳಿ</strong>:ನಗರದ ಗೋಕುಲ ರಸ್ತೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ, ಶ್ರೀಗಂಧ ಮರದ ತುಂಡುಗಳನ್ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಐಬಿ (ನಗರ ಅಪರಾಧ ತನಿಖಾ ದಳ) ಮತ್ತು ಗೋಕುಲ ರಸ್ತೆ ಪೊಲೀಸರು ಬಂಧಿಸಿದ್ದಾರೆ.</p>.<p>ಸಹದೇವನಗರದ ಸಿದ್ಧಾರೂಢ ಉಪ್ಪಾರ ಅಲಿಯಾಸ್ ಸಿದ್ದು (22) ಮತ್ತು ಕಿರಣ ಗಡಾದ (26) ಬಂಧಿತರು. ಇವರಿಂದ ₹34 ಸಾವಿರ ಮೌಲ್ಯದ 17 ಕೆ.ಜಿ ಶ್ರೀಗಂಧದ ತುಂಡುಗಳು, 2 ಬೈಕ್ ಹಾಗೂ ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಆರೋಪಿಗಳು ಮಂಗಳವಾರ ರಾತ್ರಿ 10ರ ಸುಮಾರಿಗೆ ಬಸ್ ನಿಲ್ದಾಣದ ಬಳಿ ಶ್ರೀಗಂಧ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸಿಕ್ಕ ಖಚಿತ ಮೇರೆಗೆ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಸಿಸಿಐಬಿ ಇನ್ಸ್ಪೆಕ್ಟರ್ ಅಲ್ತಾಫ ಎಂ., ಗೋಕುಲ ರಸ್ತೆ ಠಾಣೆಯ ಎಎಸ್ಐ ಎಫ್.ಐ. ತಡಸಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.</p>.<p class="Subhead">ಕಾರ್ಮಿಕ ಸಾವು:</p>.<p>ತಾಲ್ಲೂಕಿನ ವರೂರು ಗ್ರಾಮದಲ್ಲಿನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಮಿಕರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ. ಪಂಚಾಕ್ಷರಯ್ಯ ಮಹಾಂತಯ್ಯ ಹಿರೇಮಠ (46) ಮೃತರು.</p>.<p>ಕಟ್ಟಡ ನಿರ್ಮಾಣ ಕಾರ್ಮಿಕರಾದ ಪಂಚಾಕ್ಷರಯ್ಯ ಅವರು, ಸೆ. 1ರಂದು ಗ್ರಾಮದ ಗುಣಧರನಂದಿ ಮಹಾರಾಜರ ಕಾಲೇಜಿನ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದರು. ಈ ವೇಳೆ, ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>:ನಗರದ ಗೋಕುಲ ರಸ್ತೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ, ಶ್ರೀಗಂಧ ಮರದ ತುಂಡುಗಳನ್ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಐಬಿ (ನಗರ ಅಪರಾಧ ತನಿಖಾ ದಳ) ಮತ್ತು ಗೋಕುಲ ರಸ್ತೆ ಪೊಲೀಸರು ಬಂಧಿಸಿದ್ದಾರೆ.</p>.<p>ಸಹದೇವನಗರದ ಸಿದ್ಧಾರೂಢ ಉಪ್ಪಾರ ಅಲಿಯಾಸ್ ಸಿದ್ದು (22) ಮತ್ತು ಕಿರಣ ಗಡಾದ (26) ಬಂಧಿತರು. ಇವರಿಂದ ₹34 ಸಾವಿರ ಮೌಲ್ಯದ 17 ಕೆ.ಜಿ ಶ್ರೀಗಂಧದ ತುಂಡುಗಳು, 2 ಬೈಕ್ ಹಾಗೂ ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಆರೋಪಿಗಳು ಮಂಗಳವಾರ ರಾತ್ರಿ 10ರ ಸುಮಾರಿಗೆ ಬಸ್ ನಿಲ್ದಾಣದ ಬಳಿ ಶ್ರೀಗಂಧ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸಿಕ್ಕ ಖಚಿತ ಮೇರೆಗೆ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಸಿಸಿಐಬಿ ಇನ್ಸ್ಪೆಕ್ಟರ್ ಅಲ್ತಾಫ ಎಂ., ಗೋಕುಲ ರಸ್ತೆ ಠಾಣೆಯ ಎಎಸ್ಐ ಎಫ್.ಐ. ತಡಸಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.</p>.<p class="Subhead">ಕಾರ್ಮಿಕ ಸಾವು:</p>.<p>ತಾಲ್ಲೂಕಿನ ವರೂರು ಗ್ರಾಮದಲ್ಲಿನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಮಿಕರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ. ಪಂಚಾಕ್ಷರಯ್ಯ ಮಹಾಂತಯ್ಯ ಹಿರೇಮಠ (46) ಮೃತರು.</p>.<p>ಕಟ್ಟಡ ನಿರ್ಮಾಣ ಕಾರ್ಮಿಕರಾದ ಪಂಚಾಕ್ಷರಯ್ಯ ಅವರು, ಸೆ. 1ರಂದು ಗ್ರಾಮದ ಗುಣಧರನಂದಿ ಮಹಾರಾಜರ ಕಾಲೇಜಿನ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದರು. ಈ ವೇಳೆ, ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>