<p><strong>ಹುಬ್ಬಳ್ಳಿ</strong>: ‘ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿಸುವ ನಿಟ್ಟಿನಲ್ಲಿ ಶಾಲಾ ಪಠ್ಯಕ್ರಮದಲ್ಲಿ ನೈತಿಕ ಮತ್ತು ಮೌಲ್ಯ ಶಿಕ್ಷಣ ಅಳವಡಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಪ್ರತಿಯೊಬ್ಬ ವಿದ್ಯಾರ್ಥಿಗೆ ಔಪಚಾರಿಕ ಮತ್ತು ಅನೌಪಚಾರಿಕ ಶಿಕ್ಷಣದ ಅಗತ್ಯ ಇದೆ. ವಿದ್ಯಾರ್ಥಿ ಕೇವಲ ಪಠ್ಯದಲ್ಲಿನ ವಿಷಯ ತಿಳಿದುಕೊಂಡು ಜೀವನ ನಡೆಸಲು ಆಗದು. ಸಾಮಾನ್ಯ ಜ್ಞಾನವೂ ಬೇಕು’ ಎಂದು ತಿಳಿಸಿದ್ದಾರೆ.</p>.<p>‘ಪ್ರಸ್ತುತ ಸಮಾಜದಲ್ಲಿ ಅನ್ಯಾಯ, ಕ್ರೌರ್ಯ, ಅಸಹನೆ, ದುರಾಚಾರ, ಹೊಂದಾಣಿಕೆ ಇಲ್ಲದಿರುವುದನ್ನು ಕಾಣುತ್ತೇವೆ. ಇದಕ್ಕೆ ಈಗಿನ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣದಲ್ಲಿ ಮೌಲ್ಯದ ಕೊರತೆ, ಅತ್ಯಾದುನಿಕ ತಂತ್ರಜ್ಞಾನ ಬಳಕೆಯೇ ಕಾರಣ. ಉತ್ತಮ ಆಚಾರ, ವಿಚಾರ, ಸಂಸ್ಕಾರಕ್ಕೆ ಮೌಲ್ಯಯುತ ಶಿಕ್ಷಣ ನೀಡುವುದು ಅವಶ್ಯ’ ಎಂದು ತಿಳಿಸಿದ್ದಾರೆ.</p>.<p>‘ಈ ಹಿಂದಿನ ಪಠ್ಯಕ್ರಮದಲ್ಲಿ ನೀತಿ ಕಥೆಗಳಿರುತ್ತಿದ್ದವು. ಇದರಿಂದ ಮಕ್ಕಳು ಪ್ರಾಮಾಣಿಕತೆ, ಸಮಗ್ರತೆ, ಸಹಾನುಭೂತಿ, ದಯೆ, ಜವಾಬ್ದಾರಿ, ತಾಳ್ಮೆ, ಶಿಸ್ತು, ಭ್ರಾತೃತ್ವ ಗುಣಗಳನ್ನು ಬೆಳೆಸಿಕೊಂಡು ಸಾತ್ವಿಕ, ಆದರ್ಶಯುತ ಜೀವನ ನಡೆಸುತ್ತಿದ್ದರು. ಈಗಿನ ಮಕ್ಕಳಲ್ಲಿ ಈ ಅಂಶಗಳು ಕಾಣಸಿಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p>‘ಆನ್ಲೈನ್ ಮೂಲಕ ಶಿಕ್ಷಣ ನೀಡುವುದು ಸರಿಯಾದ ಪದ್ಧತಿಯಲ್ಲ. ಎಲ್ಕೆಜಿಯಿಂದ ಪಿಯುಸಿವರೆಗೆ ಆನ್ಲೈನ್ ಶಿಕ್ಷಣವನ್ನು ರದ್ದುಗೊಳಿಸುವ ಕುರಿತು ಈಚೆಗೆ ನಡೆದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಚೈಲ್ಡ್ ಫಂಡ್ ಇಂಡಿಯಾದ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಉತ್ತಮ ಕ್ರಮ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿಸುವ ನಿಟ್ಟಿನಲ್ಲಿ ಶಾಲಾ ಪಠ್ಯಕ್ರಮದಲ್ಲಿ ನೈತಿಕ ಮತ್ತು ಮೌಲ್ಯ ಶಿಕ್ಷಣ ಅಳವಡಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಪ್ರತಿಯೊಬ್ಬ ವಿದ್ಯಾರ್ಥಿಗೆ ಔಪಚಾರಿಕ ಮತ್ತು ಅನೌಪಚಾರಿಕ ಶಿಕ್ಷಣದ ಅಗತ್ಯ ಇದೆ. ವಿದ್ಯಾರ್ಥಿ ಕೇವಲ ಪಠ್ಯದಲ್ಲಿನ ವಿಷಯ ತಿಳಿದುಕೊಂಡು ಜೀವನ ನಡೆಸಲು ಆಗದು. ಸಾಮಾನ್ಯ ಜ್ಞಾನವೂ ಬೇಕು’ ಎಂದು ತಿಳಿಸಿದ್ದಾರೆ.</p>.<p>‘ಪ್ರಸ್ತುತ ಸಮಾಜದಲ್ಲಿ ಅನ್ಯಾಯ, ಕ್ರೌರ್ಯ, ಅಸಹನೆ, ದುರಾಚಾರ, ಹೊಂದಾಣಿಕೆ ಇಲ್ಲದಿರುವುದನ್ನು ಕಾಣುತ್ತೇವೆ. ಇದಕ್ಕೆ ಈಗಿನ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣದಲ್ಲಿ ಮೌಲ್ಯದ ಕೊರತೆ, ಅತ್ಯಾದುನಿಕ ತಂತ್ರಜ್ಞಾನ ಬಳಕೆಯೇ ಕಾರಣ. ಉತ್ತಮ ಆಚಾರ, ವಿಚಾರ, ಸಂಸ್ಕಾರಕ್ಕೆ ಮೌಲ್ಯಯುತ ಶಿಕ್ಷಣ ನೀಡುವುದು ಅವಶ್ಯ’ ಎಂದು ತಿಳಿಸಿದ್ದಾರೆ.</p>.<p>‘ಈ ಹಿಂದಿನ ಪಠ್ಯಕ್ರಮದಲ್ಲಿ ನೀತಿ ಕಥೆಗಳಿರುತ್ತಿದ್ದವು. ಇದರಿಂದ ಮಕ್ಕಳು ಪ್ರಾಮಾಣಿಕತೆ, ಸಮಗ್ರತೆ, ಸಹಾನುಭೂತಿ, ದಯೆ, ಜವಾಬ್ದಾರಿ, ತಾಳ್ಮೆ, ಶಿಸ್ತು, ಭ್ರಾತೃತ್ವ ಗುಣಗಳನ್ನು ಬೆಳೆಸಿಕೊಂಡು ಸಾತ್ವಿಕ, ಆದರ್ಶಯುತ ಜೀವನ ನಡೆಸುತ್ತಿದ್ದರು. ಈಗಿನ ಮಕ್ಕಳಲ್ಲಿ ಈ ಅಂಶಗಳು ಕಾಣಸಿಗುವುದಿಲ್ಲ’ ಎಂದು ಹೇಳಿದ್ದಾರೆ.</p>.<p>‘ಆನ್ಲೈನ್ ಮೂಲಕ ಶಿಕ್ಷಣ ನೀಡುವುದು ಸರಿಯಾದ ಪದ್ಧತಿಯಲ್ಲ. ಎಲ್ಕೆಜಿಯಿಂದ ಪಿಯುಸಿವರೆಗೆ ಆನ್ಲೈನ್ ಶಿಕ್ಷಣವನ್ನು ರದ್ದುಗೊಳಿಸುವ ಕುರಿತು ಈಚೆಗೆ ನಡೆದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಚೈಲ್ಡ್ ಫಂಡ್ ಇಂಡಿಯಾದ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಉತ್ತಮ ಕ್ರಮ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>