‘ಖಾತೆ ಬದಲಾಯಿಸಿ ಹಾಗೂ ನಮ್ಮವರನ್ನು ಸಚಿವರನ್ನಾಗಿ ಮಾಡಿ ಎಂದು ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಬಾರದು. ರಾಜ್ಯದಲ್ಲಿ ಪ್ರವಾಹ ಸೇರಿದಂತೆ ಹಲವು ಸಮಸ್ಯೆಗಳಿವೆ. ಹಿಂದಿನ ಸಿ.ಎಂ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಕೊಡುತ್ತೇನೆ ಎಂದು, ₹1 ಲಕ್ಷ ಕೊಟ್ಟು ಕೈ ತೊಳೆದುಕೊಂಡರು. ಇವುಗಳ ಹಿಂದಿರುವ ಸೂತ್ರದಾರರು ಮಗು ಚಿವುಟಿ, ತೊಟ್ಟಿಲನ್ನೂ ತೂಗುತ್ತಾರೆ. ಬಳಿಕ, ಅರವಿಂದ ಬೆಲ್ಲದ ಮತ್ತು ನನ್ನತ್ತ ಕೈ ತೋರಿಸುತ್ತಾರೆ. ರಮೇಶ ಜಾರಕಿಹೊಳಿ ಅವರನ್ನೂ ಹೀಗೆಯೇ ಸಿಲುಕಿಸಿದರು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.